ದೇಶ- ವಿದೇಶ

ಚೀನಾಕ್ಕೆ ಬಂದಿಳಿದ ಪ್ರಧಾನಿ ಮೋದಿ : ಕೆಂಪು ಹಾಸಿಗೆಯಲ್ಲಿ ಸ್ವಾಗತ ಕೋರಿದ ಚೀನಾ

ಚೀನಾ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ತಿಯಾಂಜಿನ್​​ಗೆ ಶನಿವಾರ ಬಂದಿಳಿದ್ದಾರೆ. ಮೋದಿ ಅವರಿಗೆ ತಿಯಾಂಜಿನ್ ಏರ್​​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೀನಾ ಸಚಿವ ಲೀ ಲೆಚೆಂಗ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ.

ಇನ್ನು ತಿಯಾಂಜಿನ್​ನಲ್ಲಿ ಎಸ್​​ಸಿಒ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಅವರನ್ನು ಕೂಡ ಮೋದಿ ಅವರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಕ್ಸಿ ಜಿನ್​ಪಿಂಗ್​ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಇದರ ಜತೆಗೆ ರಷ್ಯಾ ಅಧ್ಯಕ್ಷ ಪುಟಿನ್​ರನ್ನು ಸಹ​ ಭೇಟಿಯಾಗಲಿದ್ದಾರೆ.

ಪ್ರಧಾನಿ ಮೋದಿ ಅವರು 2018ರ ನಂತರ ಅಂದರೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಚೀನಾ ಭೇಟಿ ನೀಡಿದ್ದಾರೆ. ಗಲ್ವಾನ್ ಕಣಿವೆಯಲ್ಲಿನ ಘರ್ಷಣೆಯ ನಂತರ 2020 ರಲ್ಲಿ ಹದಗೆಟ್ಟಿದ್ದ ಭಾರತ-ಚೀನಾ ಸಂಬಂಧ ಮತ್ತೆ ಸುಧಾರಿಸುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ಇನ್ನು ಚೀನಾ ಇದೆ ಮೊದಲು ಬಾರಿ ಒಂದು ದೇಶದ ಪ್ರಧಾನಿಗೆ ರೆಡ್ ಕಾರ್ಪೆಟ್ ಮೂಲಕ ಸ್ವಾಗತಿಸುವುದು ಅಪರೂಪವಾಗಿದೆ. ಸುಮಾರು ಏಳು ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಕ್ಕೆ ಭೇಟಿ ನೀಡಿರುವುದು ವಿಶ್ವದ ಗಮನ ಸೆಳೆದಿದೆ.

ಇನ್ನು ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಈಗಾಗಲೇ ಹದ್ದಗೆಟ್ಟಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪರ ಯುದ್ಧವನ್ನು ಶುರು ಮಾಡಿದ್ದು, ಚೀನಾದ ಈ ಶೃಂಗಸಭೆಯಲ್ಲಿ 50% ಸುಂಕವನ್ನು ವಿಧಿಸುವುದರೊಂದಿಗೆ, ಪ್ರಾದೇಶಿಕ ಭದ್ರತಾ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ. ರಷ್ಯಾದ ತೈಲದ ಎರಡು ದೊಡ್ಡ ಗ್ರಾಹಕರಾದ ಚೀನಾ ಮತ್ತು ಭಾರತದೊಂದಿಗೆ ವೇದಿಕೆ ಹಂಚಿಕೊಳ್ಳಲು ಈ ಶೃಂಗಸಭೆಯು ಪುಟಿನ್‌ಗೆ ಒಂದು ಅವಕಾಶವಾಗಲಿದೆ. ರಷ್ಯಾದ ಇಂಧನ ಮತ್ತು ರಕ್ಷಣಾ ಉತ್ಪನ್ನಗಳನ್ನು ಖರೀದಿಸಿದ್ದಕ್ಕಾಗಿ ಟ್ರಂಪ್ ಭಾರತದ ಮೇಲೆ 25% ಹೆಚ್ಚುವರಿ ಸುಂಕ ವಿಧಿಸಿರುವುದು ಭಾರತಕ್ಕೆ ದೊಡ್ಡ ಹೊರೆಯಾಗಿದೆ. ಆದರೆ ಚೀನಾದ ಮೇಲೆ ಅಂತಹ ಯಾವುದೇ ಸುಂಕವನ್ನು ವಿಧಿಸಲಾಗಿಲ್ಲ. ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವವರೆಗೆ ಈ ಸುಂಕ ಹೊಡೆತ ತಪ್ಪಿದಲ್ಲ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago