ದೇಶ- ವಿದೇಶ

ಚೀನಾಕ್ಕೆ ಬಂದಿಳಿದ ಪ್ರಧಾನಿ ಮೋದಿ : ಕೆಂಪು ಹಾಸಿಗೆಯಲ್ಲಿ ಸ್ವಾಗತ ಕೋರಿದ ಚೀನಾ

ಚೀನಾ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ತಿಯಾಂಜಿನ್​​ಗೆ ಶನಿವಾರ ಬಂದಿಳಿದ್ದಾರೆ. ಮೋದಿ ಅವರಿಗೆ ತಿಯಾಂಜಿನ್ ಏರ್​​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೀನಾ ಸಚಿವ ಲೀ ಲೆಚೆಂಗ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ.

ಇನ್ನು ತಿಯಾಂಜಿನ್​ನಲ್ಲಿ ಎಸ್​​ಸಿಒ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಅವರನ್ನು ಕೂಡ ಮೋದಿ ಅವರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಕ್ಸಿ ಜಿನ್​ಪಿಂಗ್​ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಇದರ ಜತೆಗೆ ರಷ್ಯಾ ಅಧ್ಯಕ್ಷ ಪುಟಿನ್​ರನ್ನು ಸಹ​ ಭೇಟಿಯಾಗಲಿದ್ದಾರೆ.

ಪ್ರಧಾನಿ ಮೋದಿ ಅವರು 2018ರ ನಂತರ ಅಂದರೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಚೀನಾ ಭೇಟಿ ನೀಡಿದ್ದಾರೆ. ಗಲ್ವಾನ್ ಕಣಿವೆಯಲ್ಲಿನ ಘರ್ಷಣೆಯ ನಂತರ 2020 ರಲ್ಲಿ ಹದಗೆಟ್ಟಿದ್ದ ಭಾರತ-ಚೀನಾ ಸಂಬಂಧ ಮತ್ತೆ ಸುಧಾರಿಸುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

ಇನ್ನು ಚೀನಾ ಇದೆ ಮೊದಲು ಬಾರಿ ಒಂದು ದೇಶದ ಪ್ರಧಾನಿಗೆ ರೆಡ್ ಕಾರ್ಪೆಟ್ ಮೂಲಕ ಸ್ವಾಗತಿಸುವುದು ಅಪರೂಪವಾಗಿದೆ. ಸುಮಾರು ಏಳು ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಕ್ಕೆ ಭೇಟಿ ನೀಡಿರುವುದು ವಿಶ್ವದ ಗಮನ ಸೆಳೆದಿದೆ.

ಇನ್ನು ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಈಗಾಗಲೇ ಹದ್ದಗೆಟ್ಟಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪರ ಯುದ್ಧವನ್ನು ಶುರು ಮಾಡಿದ್ದು, ಚೀನಾದ ಈ ಶೃಂಗಸಭೆಯಲ್ಲಿ 50% ಸುಂಕವನ್ನು ವಿಧಿಸುವುದರೊಂದಿಗೆ, ಪ್ರಾದೇಶಿಕ ಭದ್ರತಾ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ. ರಷ್ಯಾದ ತೈಲದ ಎರಡು ದೊಡ್ಡ ಗ್ರಾಹಕರಾದ ಚೀನಾ ಮತ್ತು ಭಾರತದೊಂದಿಗೆ ವೇದಿಕೆ ಹಂಚಿಕೊಳ್ಳಲು ಈ ಶೃಂಗಸಭೆಯು ಪುಟಿನ್‌ಗೆ ಒಂದು ಅವಕಾಶವಾಗಲಿದೆ. ರಷ್ಯಾದ ಇಂಧನ ಮತ್ತು ರಕ್ಷಣಾ ಉತ್ಪನ್ನಗಳನ್ನು ಖರೀದಿಸಿದ್ದಕ್ಕಾಗಿ ಟ್ರಂಪ್ ಭಾರತದ ಮೇಲೆ 25% ಹೆಚ್ಚುವರಿ ಸುಂಕ ವಿಧಿಸಿರುವುದು ಭಾರತಕ್ಕೆ ದೊಡ್ಡ ಹೊರೆಯಾಗಿದೆ. ಆದರೆ ಚೀನಾದ ಮೇಲೆ ಅಂತಹ ಯಾವುದೇ ಸುಂಕವನ್ನು ವಿಧಿಸಲಾಗಿಲ್ಲ. ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವವರೆಗೆ ಈ ಸುಂಕ ಹೊಡೆತ ತಪ್ಪಿದಲ್ಲ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago