modi china entry
ಚೀನಾ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ತಿಯಾಂಜಿನ್ಗೆ ಶನಿವಾರ ಬಂದಿಳಿದ್ದಾರೆ. ಮೋದಿ ಅವರಿಗೆ ತಿಯಾಂಜಿನ್ ಏರ್ಪೋರ್ಟ್ನಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಚೀನಾ ಸಚಿವ ಲೀ ಲೆಚೆಂಗ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ.
ಇನ್ನು ತಿಯಾಂಜಿನ್ನಲ್ಲಿ ಎಸ್ಸಿಒ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಕೂಡ ಮೋದಿ ಅವರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಕ್ಸಿ ಜಿನ್ಪಿಂಗ್ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಇದರ ಜತೆಗೆ ರಷ್ಯಾ ಅಧ್ಯಕ್ಷ ಪುಟಿನ್ರನ್ನು ಸಹ ಭೇಟಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅವರು 2018ರ ನಂತರ ಅಂದರೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಚೀನಾ ಭೇಟಿ ನೀಡಿದ್ದಾರೆ. ಗಲ್ವಾನ್ ಕಣಿವೆಯಲ್ಲಿನ ಘರ್ಷಣೆಯ ನಂತರ 2020 ರಲ್ಲಿ ಹದಗೆಟ್ಟಿದ್ದ ಭಾರತ-ಚೀನಾ ಸಂಬಂಧ ಮತ್ತೆ ಸುಧಾರಿಸುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ಈ ಮೂಲಕ ಭಾರತ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.
ಇನ್ನು ಚೀನಾ ಇದೆ ಮೊದಲು ಬಾರಿ ಒಂದು ದೇಶದ ಪ್ರಧಾನಿಗೆ ರೆಡ್ ಕಾರ್ಪೆಟ್ ಮೂಲಕ ಸ್ವಾಗತಿಸುವುದು ಅಪರೂಪವಾಗಿದೆ. ಸುಮಾರು ಏಳು ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಕ್ಕೆ ಭೇಟಿ ನೀಡಿರುವುದು ವಿಶ್ವದ ಗಮನ ಸೆಳೆದಿದೆ.
ಇನ್ನು ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಈಗಾಗಲೇ ಹದ್ದಗೆಟ್ಟಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪರ ಯುದ್ಧವನ್ನು ಶುರು ಮಾಡಿದ್ದು, ಚೀನಾದ ಈ ಶೃಂಗಸಭೆಯಲ್ಲಿ 50% ಸುಂಕವನ್ನು ವಿಧಿಸುವುದರೊಂದಿಗೆ, ಪ್ರಾದೇಶಿಕ ಭದ್ರತಾ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ. ರಷ್ಯಾದ ತೈಲದ ಎರಡು ದೊಡ್ಡ ಗ್ರಾಹಕರಾದ ಚೀನಾ ಮತ್ತು ಭಾರತದೊಂದಿಗೆ ವೇದಿಕೆ ಹಂಚಿಕೊಳ್ಳಲು ಈ ಶೃಂಗಸಭೆಯು ಪುಟಿನ್ಗೆ ಒಂದು ಅವಕಾಶವಾಗಲಿದೆ. ರಷ್ಯಾದ ಇಂಧನ ಮತ್ತು ರಕ್ಷಣಾ ಉತ್ಪನ್ನಗಳನ್ನು ಖರೀದಿಸಿದ್ದಕ್ಕಾಗಿ ಟ್ರಂಪ್ ಭಾರತದ ಮೇಲೆ 25% ಹೆಚ್ಚುವರಿ ಸುಂಕ ವಿಧಿಸಿರುವುದು ಭಾರತಕ್ಕೆ ದೊಡ್ಡ ಹೊರೆಯಾಗಿದೆ. ಆದರೆ ಚೀನಾದ ಮೇಲೆ ಅಂತಹ ಯಾವುದೇ ಸುಂಕವನ್ನು ವಿಧಿಸಲಾಗಿಲ್ಲ. ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವವರೆಗೆ ಈ ಸುಂಕ ಹೊಡೆತ ತಪ್ಪಿದಲ್ಲ ಎಂದು ಹೇಳಲಾಗುತ್ತಿದೆ.
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…