ದೇಶ- ವಿದೇಶ

ನಾಳೆ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ

ಇಂಫಾಲ್ : ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ೮,೫೦೦ ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಕಿಗಳು ಬಹುಸಂಖ್ಯಾತರಾಗಿರುವ ಚುರಾಚಂದ್‌ಪುರದ ಪೀಸ್ ಗ್ರೌಂಡ್‌ನಲ್ಲಿ ಪ್ರಧಾನಿ ಮೋದಿ ೭,೩೦೦ ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಮೈಟೈ ಬಹುಸಂಖ್ಯಾತ ಇಂಫಾಲ್‌ನಲ್ಲಿ ಒಟ್ಟು ೧,೨೦೦ ಕೋಟಿ ರೂ.ಗಳ ಮೂಲಸೌಕರ್ಯ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರದಿಂದ ಮೇ ೨೦೨೩ರಿಂದ ಇದುವರೆಗೆ ೨೬೦ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಕುಕಿ ಮತ್ತು ಮೈಟೈ ಸಮುದಾಯಗಳ ನಡುವಿನ ಜನಾಂಗೀಯ ಕಲಹದ ನಂತರ ರಾಜ್ಯಕ್ಕೆ ಭೇಟಿ ನೀಡದ ಬಗ್ಗೆ ವಿರೋಧ ಪಕ್ಷಗಳು ಪದೇ ಪದೇ ಟೀಕಿಸುತ್ತಿರುವ ನಡುವೆಯೇ ಪ್ರಧಾನಿ ಮೋದಿ ಶನಿವಾರ ಭೇಟಿ ನೀಡುತ್ತಿದ್ದಾರೆ.

ಮಣಿಪುರ ಸರ್ಕಾರ ಗುರುವಾರ ಸಂಜೆ ಚುರಾಚಂದ್‌ಪುರದ ಪೀಸ್ ಗ್ರೌಂಡ್ ಮತ್ತು ಇಂಫಾಲ್‌ನ ಕಾಂಗ್ಲಾ ಕೋಟೆಯಲ್ಲಿ ಪ್ರಧಾನಿಯವರ ಕಾರ್ಯಕ್ರಮದ ದೊಡ್ಡ ದೊಡ್ಡ ಜಾಹೀರಾತು ಫಲಕವನ್ನು ಹಾಕಿದೆ. ಇಂಫಾಲ್‌ನ ಪ್ರಮುಖ ಸ್ಥಳವಾದ ಕೀಸಂಪತ್ ಜಂಕ್ಷನ್‌ನಲ್ಲಿ ಈ ಹೋರ್ಡಿಂಗ್ ಕಾಣಿಸಿಕೊಂಡಿದ್ದು, ಇದು ಬಿಜೆಪಿ ರಾಜ್ಯ ಪ್ರಧಾನ ಕಚೇರಿಗೂ ಹತ್ತಿರದಲ್ಲಿದೆ.

ಆಂದೋಲನ ಡೆಸ್ಕ್

Recent Posts

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

16 seconds ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

13 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

14 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

16 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

16 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

18 hours ago