ನವದೆಹಲಿ: ಉತ್ತರ ಪ್ರದೇಶದ ಸಾಹಿಬಾಬಾದ್ನಿಂದ ದೆಹಲಿಯ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ.
ಮೋದಿ ಅವರು ಇಂದು(ಜನವರಿ.5) ದೆಹಲಿ-ಮೀರತ್ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಂ(ಆರ್ಆರ್ಟಿಎಸ್) ಕಾರಿಡಾರ್ ಅನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ಈ ವೇಳೆ 12 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಇನ್ನೂ ಉದ್ಘಾಟನೆ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಸಾಹಿಬಾಬಾದ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಸುಮಾರು13 ಕಿ.ಮೀ. ದೂರ ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ತಮ್ಮ ಪ್ರಯಾಣದ ವೇಳೆ ಮಕ್ಕಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ನ್ಯೂ ಅಶೋಕ ನಗರ ಹಾಗೂ ಮೀರತ್ ಸೌತ್ ನಡುವೆ 11 ನಿಲ್ದಾಣಗಳಿವೆ. ಪ್ರಯಾಣಿಕರ ಓಡಾಟಕ್ಕೆ ಇಂದು ಸಂಜೆ 5 ಗಂಟೆಗೆ ಪ್ರಾರಂಭವಾಗಲಿದೆ. ರೈಲುಗಳು ಪ್ರತಿ 15 ನಿಮಿಷಗಳಿಗೊಮ್ಮೆ ಲಭ್ಯವಿರುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…