ನವದೆಹಲಿ: ಉತ್ತರ ಪ್ರದೇಶದ ಸಾಹಿಬಾಬಾದ್ನಿಂದ ದೆಹಲಿಯ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ.
ಮೋದಿ ಅವರು ಇಂದು(ಜನವರಿ.5) ದೆಹಲಿ-ಮೀರತ್ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಂ(ಆರ್ಆರ್ಟಿಎಸ್) ಕಾರಿಡಾರ್ ಅನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ಈ ವೇಳೆ 12 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಇನ್ನೂ ಉದ್ಘಾಟನೆ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಸಾಹಿಬಾಬಾದ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಸುಮಾರು13 ಕಿ.ಮೀ. ದೂರ ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ತಮ್ಮ ಪ್ರಯಾಣದ ವೇಳೆ ಮಕ್ಕಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ನ್ಯೂ ಅಶೋಕ ನಗರ ಹಾಗೂ ಮೀರತ್ ಸೌತ್ ನಡುವೆ 11 ನಿಲ್ದಾಣಗಳಿವೆ. ಪ್ರಯಾಣಿಕರ ಓಡಾಟಕ್ಕೆ ಇಂದು ಸಂಜೆ 5 ಗಂಟೆಗೆ ಪ್ರಾರಂಭವಾಗಲಿದೆ. ರೈಲುಗಳು ಪ್ರತಿ 15 ನಿಮಿಷಗಳಿಗೊಮ್ಮೆ ಲಭ್ಯವಿರುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…