ಪಂಜಾಬ್‌ನ ಅದಂಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

ಅದಂಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಂಜಾಬ್‍ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ ಎಂದೇ ವ್ಯಾಖ್ಯಾನಿಸಲಾಗಿದೆ. ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಫೈಟರ್ ಪೈಲಟ್‍ಗಳು ಮತ್ತು ತಾಂತ್ರಿಕ ಸಹಾಯಕ ಸಿಬ್ಬಂದಿಯನ್ನು ಪ್ರಧಾನಿ ಮೋದಿ ಭೇಟಿ ಮಾಡಿ ಕಾರ್ಯಾಚರಣೆಯ ವಿವರಗಳನ್ನು ಪಡೆದುಕೊಂಡರು. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.

ಪ್ರಧಾನಮಂತ್ರಿ ಅವರೇ ವಾಯು ಯೋಧರನ್ನು ಭೇಟಿ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಬೆಳಗ್ಗೆ 7 ಗಂಟೆಗೆ ದೆಹಲಿಯ ಪಾಲಂ ಏರ್ ಬೇಸ್‌ನಿಂದ ಅದಂಪುರಕ್ಕೆ ತೆರಳಿದರು. ವಾಯುಸೇನೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ ಪಿ ಸಿಂಗ್ ಅವರು ಸಹ ಜೊತೆಗಿದ್ದರು. ಬಳಿಕ ವಾಯುವಿಹಾರಿಗಳೊಂದಿಗೆ ಸುಮಾರು ಒಂದು ಗಂಟೆ ಕಳೆದರು. ಆದಂಪುರ ಏರ್ ಬೇಸ್ ವಾಯುಪಡೆಯ ಒಟ್ಟು 29 ಫೈಟರ್ ಜೆಟ್‍ಗಳ ನೆಲೆಯಾಗಿದೆ.

ಭಾರತದ ಆಪರೇಷನ್ ಸಿಂಧೂರ್ ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಂಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‍ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕೊಂಕಣಿ ಬಂಧುಗಳ ಉಗಾದಿ ಎಂದರೆ ಪೂರಣ್ ಪೋಳಿ, ದಾಳಿತೋಯ್, ಉಬ್ಬಟಿ ಮತ್ತು ಕಡ್ಲೆಬೇಳೆ ಪಾಯಸ

ಸುಮತಿ ಶೆಣೈ, ಲೇಖಕಿ ಮತ್ತು ಅನುವಾದಕಿ ಪ್ರತಿ ಹಬ್ಬದ ಆಚರಣೆಯನ್ನೂ ಅಂದು ತಯಾರಿಸುವ ಗೌಡ ಸಾರಸ್ವತ ಬ್ರಾಹ್ಮಣ- ಸಮುದಾಯಕ್ಕೇ ಸೀಮಿತವಾದ…

4 mins ago

ಯುಗಾದಿ ವಿಶೇಷ | ಧಾರವಾಡದ ಮಣ್ಣಿನಲ್ಲಿ ಹಸಿರು ಚಿಗುರಿದ ಕಂಪನ

ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…

54 mins ago

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

2 hours ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

15 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

16 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

17 hours ago