ಅದಂಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಂಜಾಬ್ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ ಎಂದೇ ವ್ಯಾಖ್ಯಾನಿಸಲಾಗಿದೆ. ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಫೈಟರ್ ಪೈಲಟ್ಗಳು ಮತ್ತು ತಾಂತ್ರಿಕ ಸಹಾಯಕ ಸಿಬ್ಬಂದಿಯನ್ನು ಪ್ರಧಾನಿ ಮೋದಿ ಭೇಟಿ ಮಾಡಿ ಕಾರ್ಯಾಚರಣೆಯ ವಿವರಗಳನ್ನು ಪಡೆದುಕೊಂಡರು. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.
ಪ್ರಧಾನಮಂತ್ರಿ ಅವರೇ ವಾಯು ಯೋಧರನ್ನು ಭೇಟಿ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಬೆಳಗ್ಗೆ 7 ಗಂಟೆಗೆ ದೆಹಲಿಯ ಪಾಲಂ ಏರ್ ಬೇಸ್ನಿಂದ ಅದಂಪುರಕ್ಕೆ ತೆರಳಿದರು. ವಾಯುಸೇನೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ ಪಿ ಸಿಂಗ್ ಅವರು ಸಹ ಜೊತೆಗಿದ್ದರು. ಬಳಿಕ ವಾಯುವಿಹಾರಿಗಳೊಂದಿಗೆ ಸುಮಾರು ಒಂದು ಗಂಟೆ ಕಳೆದರು. ಆದಂಪುರ ಏರ್ ಬೇಸ್ ವಾಯುಪಡೆಯ ಒಟ್ಟು 29 ಫೈಟರ್ ಜೆಟ್ಗಳ ನೆಲೆಯಾಗಿದೆ.
ಭಾರತದ ಆಪರೇಷನ್ ಸಿಂಧೂರ್ ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಂಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…