ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭ ಕೋರಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಬೆಳಕಿನ ಹಬ್ಬವು ಎಲ್ಲರ ಜೀವನವನ್ನು ಸಂತೋಷ, ಸಮೃದ್ಧಿ ಹಾಗೂ ಸಾಮರಸ್ಯದಿಂದ ಬೆಳಗಿಸಲಿ ಎಂದು ಶುಭಾಶಯ ಕೋರಿದ್ದಾರೆ.
ಇನ್ನು ಭಾರತೀಯ ಗ್ರಾಹಕರು ಹಬ್ಬದ ಸಮಯದಲ್ಲಿ ಸ್ಥಳೀಯವಾಗಿ ತಯಾರಿಸಿದ ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
140 ಕೋಟಿ ಭಾರತೀಯರ ಕಠಿಣ ಪರಿಶ್ರಮ, ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ಆಚರಿಸುವ ಮೂಲಕ ಈ ಹಬ್ಬದ ಋತುವನ್ನು ಆಚರಿಸೋಣ. ಭಾರತೀಯ ಉತ್ಪನ್ನಗಳನ್ನು ಖರೀದಿಸೋಣ ಮತ್ತು ಹೇಳೋಣ. ನೀವು ಖರೀದಿ ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಳ್ಳಿ. ಈ ರೀತಿಯಾಗಿ ನೀವು ಇತರರನ್ನು ಸಹ ಅದೇ ರೀತಿ ಮಾಡಲು ಪ್ರೇರಿಪಿಸುತ್ತೀರಿ ಎಂದು ಹೇಳಿದ್ದಾರೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…