ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭ ಕೋರಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಬೆಳಕಿನ ಹಬ್ಬವು ಎಲ್ಲರ ಜೀವನವನ್ನು ಸಂತೋಷ, ಸಮೃದ್ಧಿ ಹಾಗೂ ಸಾಮರಸ್ಯದಿಂದ ಬೆಳಗಿಸಲಿ ಎಂದು ಶುಭಾಶಯ ಕೋರಿದ್ದಾರೆ.
ಇನ್ನು ಭಾರತೀಯ ಗ್ರಾಹಕರು ಹಬ್ಬದ ಸಮಯದಲ್ಲಿ ಸ್ಥಳೀಯವಾಗಿ ತಯಾರಿಸಿದ ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
140 ಕೋಟಿ ಭಾರತೀಯರ ಕಠಿಣ ಪರಿಶ್ರಮ, ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ಆಚರಿಸುವ ಮೂಲಕ ಈ ಹಬ್ಬದ ಋತುವನ್ನು ಆಚರಿಸೋಣ. ಭಾರತೀಯ ಉತ್ಪನ್ನಗಳನ್ನು ಖರೀದಿಸೋಣ ಮತ್ತು ಹೇಳೋಣ. ನೀವು ಖರೀದಿ ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಳ್ಳಿ. ಈ ರೀತಿಯಾಗಿ ನೀವು ಇತರರನ್ನು ಸಹ ಅದೇ ರೀತಿ ಮಾಡಲು ಪ್ರೇರಿಪಿಸುತ್ತೀರಿ ಎಂದು ಹೇಳಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…