ನವದೆಹಲಿ: ಬಿಹಾರದಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ತಮ್ಮ ತಾಯಿಯ ವಿರುದ್ಧ ಅಶ್ಲೀಲ ಪದಗಳಿಂದ ಕೂಡಿದ ಘೋಷಣೆಗಳನ್ನು ಕೂಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಅವರಿಂದು ಆರ್ಜೆಡಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಕುರಿತು ಮಾತನಾಡಿದ ಅವರು, ತಾಯಿಯೇ ನಮ್ಮ ಜಗತ್ತು. ತಾಯಿ ನಮ್ಮ ಸ್ವಾಭಿಮಾನ. ಬಿಹಾರದ ನೆಲದಲ್ಲಿ ಕೆಲವು ದಿನಗಳ ಹಿಂದೆ ಏನಾಯಿತೋ ಅದನ್ನು ನಾನು ಊಹಿಸಿರಲಿಲ್ಲ. ಬಿಹಾರದಲ್ಲಿ ಆರ್ಜೆಡಿ ಹಾಗೂ ಕಾಂಗ್ರೆಸ್ ವೇದಿಕೆಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಾಯಿಯನ್ನು ನೆನೆದು ಭಾವುಕರಾಗಿದ್ದಾರೆ.
ಇದನ್ನೂ ಓದಿ: ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ: ಮಾಜಿ ಸಿಎಂ ವೀರಪ್ಪ ಮೊಯ್ಲಿ
ಈ ನಿಂದನೆ ನನ್ನ ತಾಯಿಗೆ ಮಾಡಿದ ಅವಮಾನ ಮಾತ್ರವಲ್ಲ. ಇದು ದೇಶದ ಎಲ್ಲಾ ತಾಯಂದಿರು, ಸಹೋದರಿಯರು ಹಾಗೂ ಹೆಣ್ಣು ಮಕ್ಕಳಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದರು.
ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲದ ನನ್ನ ತಾಯಿಯನ್ನು ಈ ರೀತಿ ನಿಮ್ಮ ಕೆಟ್ಟ ರಾಜಕೀಯದೊಳಗೆ ಏಕೆ ಎಳೆದಿರಿ? ಎಂದು ಪ್ರಶ್ನೆ ಮಾಡಿದ್ದಾರೆ.
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…