ನವದೆಹಲಿ: ಬಿಹಾರದಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ತಮ್ಮ ತಾಯಿಯ ವಿರುದ್ಧ ಅಶ್ಲೀಲ ಪದಗಳಿಂದ ಕೂಡಿದ ಘೋಷಣೆಗಳನ್ನು ಕೂಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಅವರಿಂದು ಆರ್ಜೆಡಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಕುರಿತು ಮಾತನಾಡಿದ ಅವರು, ತಾಯಿಯೇ ನಮ್ಮ ಜಗತ್ತು. ತಾಯಿ ನಮ್ಮ ಸ್ವಾಭಿಮಾನ. ಬಿಹಾರದ ನೆಲದಲ್ಲಿ ಕೆಲವು ದಿನಗಳ ಹಿಂದೆ ಏನಾಯಿತೋ ಅದನ್ನು ನಾನು ಊಹಿಸಿರಲಿಲ್ಲ. ಬಿಹಾರದಲ್ಲಿ ಆರ್ಜೆಡಿ ಹಾಗೂ ಕಾಂಗ್ರೆಸ್ ವೇದಿಕೆಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಾಯಿಯನ್ನು ನೆನೆದು ಭಾವುಕರಾಗಿದ್ದಾರೆ.
ಇದನ್ನೂ ಓದಿ: ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ: ಮಾಜಿ ಸಿಎಂ ವೀರಪ್ಪ ಮೊಯ್ಲಿ
ಈ ನಿಂದನೆ ನನ್ನ ತಾಯಿಗೆ ಮಾಡಿದ ಅವಮಾನ ಮಾತ್ರವಲ್ಲ. ಇದು ದೇಶದ ಎಲ್ಲಾ ತಾಯಂದಿರು, ಸಹೋದರಿಯರು ಹಾಗೂ ಹೆಣ್ಣು ಮಕ್ಕಳಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದರು.
ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲದ ನನ್ನ ತಾಯಿಯನ್ನು ಈ ರೀತಿ ನಿಮ್ಮ ಕೆಟ್ಟ ರಾಜಕೀಯದೊಳಗೆ ಏಕೆ ಎಳೆದಿರಿ? ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…