ನವದೆಹಲಿ: ಬಿಹಾರದಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ತಮ್ಮ ತಾಯಿಯ ವಿರುದ್ಧ ಅಶ್ಲೀಲ ಪದಗಳಿಂದ ಕೂಡಿದ ಘೋಷಣೆಗಳನ್ನು ಕೂಗಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಅವರಿಂದು ಆರ್ಜೆಡಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಕುರಿತು ಮಾತನಾಡಿದ ಅವರು, ತಾಯಿಯೇ ನಮ್ಮ ಜಗತ್ತು. ತಾಯಿ ನಮ್ಮ ಸ್ವಾಭಿಮಾನ. ಬಿಹಾರದ ನೆಲದಲ್ಲಿ ಕೆಲವು ದಿನಗಳ ಹಿಂದೆ ಏನಾಯಿತೋ ಅದನ್ನು ನಾನು ಊಹಿಸಿರಲಿಲ್ಲ. ಬಿಹಾರದಲ್ಲಿ ಆರ್ಜೆಡಿ ಹಾಗೂ ಕಾಂಗ್ರೆಸ್ ವೇದಿಕೆಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಾಯಿಯನ್ನು ನೆನೆದು ಭಾವುಕರಾಗಿದ್ದಾರೆ.
ಇದನ್ನೂ ಓದಿ: ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ: ಮಾಜಿ ಸಿಎಂ ವೀರಪ್ಪ ಮೊಯ್ಲಿ
ಈ ನಿಂದನೆ ನನ್ನ ತಾಯಿಗೆ ಮಾಡಿದ ಅವಮಾನ ಮಾತ್ರವಲ್ಲ. ಇದು ದೇಶದ ಎಲ್ಲಾ ತಾಯಂದಿರು, ಸಹೋದರಿಯರು ಹಾಗೂ ಹೆಣ್ಣು ಮಕ್ಕಳಿಗೆ ಮಾಡಿದ ಅವಮಾನ ಎಂದು ಕಿಡಿಕಾರಿದರು.
ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲದ ನನ್ನ ತಾಯಿಯನ್ನು ಈ ರೀತಿ ನಿಮ್ಮ ಕೆಟ್ಟ ರಾಜಕೀಯದೊಳಗೆ ಏಕೆ ಎಳೆದಿರಿ? ಎಂದು ಪ್ರಶ್ನೆ ಮಾಡಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…