ದೇಶ- ವಿದೇಶ

ಮಾರುಕಟ್ಟೆಗಳಲ್ಲಿ ಸ್ಥಳೀಯ ವಸ್ತುಗಳ ಖರೀದಿ ಹೆಚ್ಚಳ: ಪ್ರಧಾನಿ ನರೇಂದ್ರ ಮೋದಿ ಸಂತಸ

ನವದೆಹಲಿ: ಜಿಎಸ್‌ಟಿ ಉತ್ಸವದ ಬಗ್ಗೆ ಜನತೆಯಲ್ಲಿ ಸಾಕಷ್ಟು ಉತ್ಸಾಹವಿದೆ. ಈ ಬಾರಿ ಹಬ್ಬಗಳ ಸಮಯದಲ್ಲಿ ಅದನ್ನು ಗಮನಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 127ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಂಸ್ಕೃತಿ ಮತ್ತು ಪ್ರಕೃತಿಯ ಆಳವಾದ ಏಕತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

ನನ್ನ ಪತ್ರದಲ್ಲಿ ಖಾದ್ಯ ತೈಲದ ಬಳಕೆಯಲ್ಲಿ 10% ಕಡಿತವನ್ನು ನಾನು ಒತ್ತಾಯಿಸಿದ್ದೆ. ಜನರು ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದರು.

ಈ ಹಬ್ಬವು ಸಂಸ್ಕೃತಿ, ಪ್ರಕೃತಿ ಹಾಗೂ ಸಮಾಜದ ಆಳವಾದ ಏಕತೆಯನ್ನು ಪ್ರತಿಬಿಂಬಿಸುತ್ತದೆ. ಛಠ್‌ ಸಮಾಜದ ಪ್ರತಿಯೊಂದು ವರ್ಗವನ್ನು ಒಂದುಗೂಡಿಸುತ್ತಾರೆ. ಇದು ಭಾರತದ ಸಾಮಾಜಿಕ ಏಕತೆಯ ಸುಂದರ ಉದಾಹರಣೆ ಎಂದು ಹೇಳಿದ್ದಾರೆ.

ಇನ್ನು ಆಪರೇಷನ್‌ ಸಿಂಧೂರ್‌ ಪ್ರತಿಯೊಬ್ಬ ಭಾರತೀಯರನ್ನು ಹೆಮ್ಮೆಯಿಂದ ತುಂಬಿದೆ. ಈ ಬಾರಿ ದೀಪಗಳು ಒಂದು ಕಾಲದಲ್ಲಿ ಮಾವೋವಾದಿ ಭಯೋತ್ಪಾದನೆಯ ಕತ್ತಲೆ ಆವರಿಸಿದ್ದ ಪ್ರದೇಶಗಳಲ್ಲಿಯೂ ಸಹ ಸಂತೋಷ ಬೆಳಗಿತು. ಜನರು ತಮ್ಮ ಮಕ್ಕಳ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದ ಮಾವೋವಾದಿ ಭಯೋತ್ಪಾದನೆಯ ಸಂಪೂರ್ಣ ನಿರ್ಮೂಲನೆಯನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ.

ನಾವೆಲ್ಲರೂ ದೀಪಾವಳಿಯನ್ನು ಆಚರಣೆ ಮಾಡಿದ್ದೇವೆ. ಈಗ ಹೆಚ್ಚಿನ ಸಂಖ್ಯೆಯ ಜನರು ಛಠ್‌ ಪೂಜೆಯಲ್ಲಿ ನಿರತರಾಗಿದ್ದಾರೆ. ಛಠ್‌ನ ಮಹಾಪರ್ವವು ಸಂಸ್ಕೃತಿ, ಪ್ರಕೃತಿ ಹಾಗೂ ಸಮಾಜದ ನಡುವಿನ ಆಳವಾದ ಏಕತೆಯ ಪ್ರತಿಬಿಂಬವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 mins ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

47 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

10 hours ago