ಗುಜರಾತ್: ಗುಜರಾತ್ನ ಜಾಮಾನಗರದಲ್ಲಿ ಭಾರತದ ಖ್ಯಾತ ಉದ್ಯಮಿ ಅನಂತ್ ಅಂಬಾನಿ ನಿರ್ಮಿಸಿರುವ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಸಂಸ್ಥೆಯಾದ “ವಂತಾರಾ” ವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು.
ವಂತಾರಾ 2,000 ಕ್ಕೂ ಹೆಚ್ಚು ಪ್ರಭೇದಗಳಿಗೆ ಮತ್ತು 1.5 ಲಕ್ಷಕ್ಕೂ ಹೆಚ್ಚು ರಕ್ಷಿಸಲ್ಪಟ್ಟ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ನೆಲೆಯಾಗಿದೆ. ಕೇಂದ್ರದಲ್ಲಿನ ವಿವಿಧ ಸೌಲಭ್ಯಗಳನ್ನು ಪ್ರಧಾನಿ ಪರಿಶೀಲಿಸಿದರು.
ವಂತಾರಾದಲ್ಲಿರುವ ವನ್ಯಜೀವಿ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ, ಎಂಆರ್ಐ, ಸಿಟಿ ಸ್ಕ್ಯಾನ್ಗಳು, ಐಸಿಯುಗಳು ಸೇರಿದಂತೆ ಇತರ ಸೌಲಭ್ಯಗಳನ್ನು ಹೊಂದಿರುವ ಪಶುವೈದ್ಯಕೀಯ ಸೌಲಭ್ಯಗಳನ್ನು ವೀಕ್ಷಿಸಿದರು ಮತ್ತು ವನ್ಯಜೀವಿ ಅರಿವಳಿಕೆ, ಹೃದ್ರೋಗ, ಮೂತ್ರಪಿಂಡಶಾಸ್ತ್ರ, ಎಂಡೋಸ್ಕೋಪಿ, ದಂತವೈದ್ಯಶಾಸ್ತ್ರ, ಆಂತರಿಕ ಔಷಧ ಇತ್ಯಾದಿಗಳನ್ನು ಹೊಂದಿರುವ ಬಹು ವಿಭಾಗಗಳನ್ನು ಸಹ ವೀಕ್ಷಿಸಿದರು.
ಪ್ರಧಾನಮಂತ್ರಿ ಅವರು ಏಷ್ಯಾಟಿಕ್ ಸಿಂಹದ ಮರಿಗಳು, ಬಿಳಿ ಸಿಂಹದ ಮರಿ, ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದವಾದ ಮೋಡದ ಚಿರತೆ ಮರಿ, ಕ್ಯಾರಕಲ್ ಮರಿ ಸೇರಿದಂತೆ ವಿವಿಧ ಪ್ರಭೇದಗಳೊಂದಿಗೆ ಆಟವಾಡಿ ಆಹಾರ ನೀಡಿದರು.
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…