ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದರು.
ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ.
ಇಂದು ಶ್ರೀನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ಹೆಲಿಕಾಪ್ಟರ್ ಮೂಲಕ ತೆರಳಿ ಸುರಂಗ ಮಾರ್ಗ ಉದ್ಘಾಟಿಸಿದರು. ಮೋದಿ ಜೊತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಮ್ಮು ಮತ್ತು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ, ರಾಜ್ಯಪಾಲ ಮನೋಜ್ ನಿನ್ಹಾ ಸೇರಿದಂತೆ ಇತರ ನಾಯಕರ ಜೊತೆಗಿದ್ದರು.
ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಗಗಾಂಗೀರ್ ಮತ್ತು ಸೋನಾಮಾರ್ಗ್ ನಡುವಿನ 6.5 ಕಿ.ಮೀ ಉದ್ದದ 2 ಪಥದ ರಸ್ತೆ ಸುರಂಗದಲ್ಲಿ ತುರ್ತು ಪರಿಸ್ಥಿತಿಗಾಗಿ ಸಮಾನಾಂತರ 7.5 ಮೀಟರ್ ಎಸ್ಕೇಪ್ ಮಾರ್ಗವನ್ನು ನಿರ್ಮಿಸಲಾಗಿದೆ.
ಸಮುದ್ರ ಮಟ್ಟಕ್ಕಿಂತ 8650 ಅಡಿ ಎತ್ತರದಲ್ಲಿ ನಿರ್ಮಿಸಿರುವ ಈ ಸುರಂಗವು ಶ್ರೀನಗರ ಮತ್ತು ಸೋನಾಮಾರ್ಗ ನಡುವೆ ಲೇಹ್ಗೆ ಹೋಗುವ ಮಾರ್ಗದಲ್ಲಿ ಎಲ್ಲಾ ಋತುಮಾನದಲ್ಲೂ ಸಂಪರ್ಕ ಕಲ್ಪಿಸುತ್ತದೆ.
2700 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ 6.5 ಕಿ.ಮೀ ಉದ್ದದ ಝಡ್-ಮೋರ್ಹ್ ಸುರಂಗದಲ್ಲಿ ಗಂಟೆಗೆ 70 ಕಿ.ಮೀ ವೇಗದಲ್ಲಿ ಚಲಿಸುವ ಅವಕಾಶವಿದೆ. ಸುರಂಗವು ಪ್ರತಿ ಗಂಟೆಗೆ 1000 ವಾಹನಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ. ಎಲ್ಲಾ ಹವಾಮಾನಗಳಲ್ಲಿಯೂ ಸಂಚಾರಕ್ಕೆ ಯೋಗ್ಯವಾಗಿರುವ ಈ ಸುರಂಗವು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ಗೂ ಸಂಪರ್ಕ ಕಲ್ಪಿಸಲಿದೆ. ಜೊತೆಗೆ ಇದರಿಂದ ಸೇನೆಯ ಓಡಾಟಕ್ಕೂ ತೀವ್ರ ಅನುಕೂಲವಾಗಲಿದೆ.
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…