ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದರು.

ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ.

ಇಂದು ಶ್ರೀನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ಹೆಲಿಕಾಪ್ಟರ್‌ ಮೂಲಕ ತೆರಳಿ ಸುರಂಗ ಮಾರ್ಗ ಉದ್ಘಾಟಿಸಿದರು. ಮೋದಿ ಜೊತೆಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಜಮ್ಮು ಮತ್ತು ಕಾಶ್ಮೀರದ ಸಿಎಂ ಓಮರ್‌ ಅಬ್ದುಲ್ಲಾ, ರಾಜ್ಯಪಾಲ ಮನೋಜ್‌ ನಿನ್ಹಾ ಸೇರಿದಂತೆ ಇತರ ನಾಯಕರ ಜೊತೆಗಿದ್ದರು.

ಮಧ್ಯ ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯ ಗಗಾಂಗೀರ್‌ ಮತ್ತು ಸೋನಾಮಾರ್ಗ್‌ ನಡುವಿನ 6.5 ಕಿ.ಮೀ ಉದ್ದದ 2 ಪಥದ ರಸ್ತೆ ಸುರಂಗದಲ್ಲಿ ತುರ್ತು ಪರಿಸ್ಥಿತಿಗಾಗಿ ಸಮಾನಾಂತರ 7.5 ಮೀಟರ್‌ ಎಸ್ಕೇಪ್‌ ಮಾರ್ಗವನ್ನು ನಿರ್ಮಿಸಲಾಗಿದೆ.

ಸಮುದ್ರ ಮಟ್ಟಕ್ಕಿಂತ 8650 ಅಡಿ ಎತ್ತರದಲ್ಲಿ ನಿರ್ಮಿಸಿರುವ ಈ ಸುರಂಗವು ಶ್ರೀನಗರ ಮತ್ತು ಸೋನಾಮಾರ್ಗ ನಡುವೆ ಲೇಹ್‌ಗೆ ಹೋಗುವ ಮಾರ್ಗದಲ್ಲಿ ಎಲ್ಲಾ ಋತುಮಾನದಲ್ಲೂ ಸಂಪರ್ಕ ಕಲ್ಪಿಸುತ್ತದೆ.

2700 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ 6.5 ಕಿ.ಮೀ ಉದ್ದದ ಝಡ್‌-ಮೋರ್ಹ್‌ ಸುರಂಗದಲ್ಲಿ ಗಂಟೆಗೆ 70 ಕಿ.ಮೀ ವೇಗದಲ್ಲಿ ಚಲಿಸುವ ಅವಕಾಶವಿದೆ. ಸುರಂಗವು ಪ್ರತಿ ಗಂಟೆಗೆ 1000 ವಾಹನಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ. ಎಲ್ಲಾ ಹವಾಮಾನಗಳಲ್ಲಿಯೂ ಸಂಚಾರಕ್ಕೆ ಯೋಗ್ಯವಾಗಿರುವ ಈ ಸುರಂಗವು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೂ ಸಂಪರ್ಕ ಕಲ್ಪಿಸಲಿದೆ. ಜೊತೆಗೆ ಇದರಿಂದ ಸೇನೆಯ ಓಡಾಟಕ್ಕೂ ತೀವ್ರ ಅನುಕೂಲವಾಗಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

3 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

3 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

3 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

3 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

3 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

3 hours ago