ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದರು.
ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ.
ಇಂದು ಶ್ರೀನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ಹೆಲಿಕಾಪ್ಟರ್ ಮೂಲಕ ತೆರಳಿ ಸುರಂಗ ಮಾರ್ಗ ಉದ್ಘಾಟಿಸಿದರು. ಮೋದಿ ಜೊತೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಮ್ಮು ಮತ್ತು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ, ರಾಜ್ಯಪಾಲ ಮನೋಜ್ ನಿನ್ಹಾ ಸೇರಿದಂತೆ ಇತರ ನಾಯಕರ ಜೊತೆಗಿದ್ದರು.
ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಗಗಾಂಗೀರ್ ಮತ್ತು ಸೋನಾಮಾರ್ಗ್ ನಡುವಿನ 6.5 ಕಿ.ಮೀ ಉದ್ದದ 2 ಪಥದ ರಸ್ತೆ ಸುರಂಗದಲ್ಲಿ ತುರ್ತು ಪರಿಸ್ಥಿತಿಗಾಗಿ ಸಮಾನಾಂತರ 7.5 ಮೀಟರ್ ಎಸ್ಕೇಪ್ ಮಾರ್ಗವನ್ನು ನಿರ್ಮಿಸಲಾಗಿದೆ.
ಸಮುದ್ರ ಮಟ್ಟಕ್ಕಿಂತ 8650 ಅಡಿ ಎತ್ತರದಲ್ಲಿ ನಿರ್ಮಿಸಿರುವ ಈ ಸುರಂಗವು ಶ್ರೀನಗರ ಮತ್ತು ಸೋನಾಮಾರ್ಗ ನಡುವೆ ಲೇಹ್ಗೆ ಹೋಗುವ ಮಾರ್ಗದಲ್ಲಿ ಎಲ್ಲಾ ಋತುಮಾನದಲ್ಲೂ ಸಂಪರ್ಕ ಕಲ್ಪಿಸುತ್ತದೆ.
2700 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ 6.5 ಕಿ.ಮೀ ಉದ್ದದ ಝಡ್-ಮೋರ್ಹ್ ಸುರಂಗದಲ್ಲಿ ಗಂಟೆಗೆ 70 ಕಿ.ಮೀ ವೇಗದಲ್ಲಿ ಚಲಿಸುವ ಅವಕಾಶವಿದೆ. ಸುರಂಗವು ಪ್ರತಿ ಗಂಟೆಗೆ 1000 ವಾಹನಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ. ಎಲ್ಲಾ ಹವಾಮಾನಗಳಲ್ಲಿಯೂ ಸಂಚಾರಕ್ಕೆ ಯೋಗ್ಯವಾಗಿರುವ ಈ ಸುರಂಗವು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ಗೂ ಸಂಪರ್ಕ ಕಲ್ಪಿಸಲಿದೆ. ಜೊತೆಗೆ ಇದರಿಂದ ಸೇನೆಯ ಓಡಾಟಕ್ಕೂ ತೀವ್ರ ಅನುಕೂಲವಾಗಲಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…