ನವದೆಹಲಿ: ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ಕೃಷಿ ಕ್ಷೇತ್ರದಲ್ಲಿ ಎರಡು ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಇವುಗಳಿಗೆ 35,440 ಕೋಟಿ ರೂ ವೆಚ್ಚ ಮಾಡಲಾಗುತ್ತದೆ. ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗಳನ್ನು ಸಹ ಪ್ರಾರಂಭಿಸಿದ್ದಾರೆ. ಇದು 24,000 ಕೋಟಿ ರೂ ವೆಚ್ಚವನ್ನು ಹೊಂದಿದೆ.
ಈ ಯೋಜನೆ ಅಡಿಯಲ್ಲಿ ಕೃಷಿ ಉತ್ಪನ್ನ ಹೆಚ್ಚಿಸುವುದು. ಕೃಷಿ ದವಸ ಧಾನ್ಯಗಳನ್ನು ಬೆಳೆಯುವುದು ಹಾಗೂ ಸಮಗ್ರ ಕೃಷಿ ಅಭಿವೃದ್ಧಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ರೈತರಿಗೆ ಅಲ್ಪಾವಧಿ ಹಾಗೂ ದೀರ್ಘಾವಧಿ ಹಣಕಾಸು ನೆರವು ಮತ್ತು ಸುಗ್ಗಿಯ ನಂತರ ಪಂಚಾಯತ್ ಮತ್ತು ಬ್ಲಾಕ್ ಲೇವಲ್ನಲ್ಲಿ ದವಸ-ಧಾನ್ಯಗಳ ದಾಸ್ತಾನು ನಿರ್ಮಾಣ ಮಾಡುವುದು ಇದರ ಗುರಿಯಾಗಿದೆ.
ಇದನ್ನು ಓದಿ : ಭಾರತಕ್ಕೆ ಬಂದಿಳಿದ ಬ್ರಿಟನ್ ಪ್ರಧಾನಿ ; ಜಾಗತಿಕ ವಿಷಯ ಕುರಿತು ಆಳೆ ಮೋದಿ-ಕೀರ್ ಮಾತುಕತೆ
ಈ ಕಾರ್ಯಕ್ರಮವು ವಾರ್ಷಿಕ 24,000 ಕೋಟಿ ರೂಗಳ ವೆಚ್ಚದಲ್ಲಿ 100 ಜಿಲ್ಲೆಗಳನ್ನು ಒಳಗೊಳ್ಳಲಿದೆ. ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ಈ ಕಾರ್ಯಕ್ರಮವು ಅಸ್ತಿತ್ವದಲ್ಲಿರುವ 36 ಯೋಜನೆಗಳನ್ನು ಒಟ್ಟುಗೂಡಿಸುತ್ತದೆ ಹಾಗೂ ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಹೆಚ್ಚಿಸುತ್ತದೆ.
ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯು ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುತ್ತದೆ. ನೀರಾವರಿ ಸೌಲಭ್ಯಗಳನ್ನು ಸುಧಾರಿಸುತ್ತದೆ ಹಾಗೂ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮವು 1.7 ಕೋಟಿ ರೈತರಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಹೆಚ್ಚಿಸುವುದು. ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುವುದು, ನೀರಾವರಿ ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ಸಾಲದ ಲಭ್ಯತೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…