ದೇಶ- ವಿದೇಶ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಪ್ರಧಾನ ಮಂತ್ರಿ ಧನ್‌-ಧಾನ್ಯ ಕೃಷಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಕೃಷಿ ಕ್ಷೇತ್ರದಲ್ಲಿ ಎರಡು ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಇವುಗಳಿಗೆ 35,440 ಕೋಟಿ ರೂ ವೆಚ್ಚ ಮಾಡಲಾಗುತ್ತದೆ. ಪ್ರಧಾನಮಂತ್ರಿ ಧನ್‌ ಧಾನ್ಯ ಕೃಷಿ ಯೋಜನೆಗಳನ್ನು ಸಹ ಪ್ರಾರಂಭಿಸಿದ್ದಾರೆ. ಇದು 24,000 ಕೋಟಿ ರೂ ವೆಚ್ಚವನ್ನು ಹೊಂದಿದೆ.

ಈ ಯೋಜನೆ ಅಡಿಯಲ್ಲಿ ಕೃಷಿ ಉತ್ಪನ್ನ ಹೆಚ್ಚಿಸುವುದು. ಕೃಷಿ ದವಸ ಧಾನ್ಯಗಳನ್ನು ಬೆಳೆಯುವುದು ಹಾಗೂ ಸಮಗ್ರ ಕೃಷಿ ಅಭಿವೃದ್ಧಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ರೈತರಿಗೆ ಅಲ್ಪಾವಧಿ ಹಾಗೂ ದೀರ್ಘಾವಧಿ ಹಣಕಾಸು ನೆರವು ಮತ್ತು ಸುಗ್ಗಿಯ ನಂತರ ಪಂಚಾಯತ್‌ ಮತ್ತು ಬ್ಲಾಕ್‌ ಲೇವಲ್‌ನಲ್ಲಿ ದವಸ-ಧಾನ್ಯಗಳ ದಾಸ್ತಾನು ನಿರ್ಮಾಣ ಮಾಡುವುದು ಇದರ ಗುರಿಯಾಗಿದೆ.

ಇದನ್ನು ಓದಿ : ಭಾರತಕ್ಕೆ ಬಂದಿಳಿದ ಬ್ರಿಟನ್‌ ಪ್ರಧಾನಿ ; ಜಾಗತಿಕ ವಿಷಯ ಕುರಿತು ಆಳೆ ಮೋದಿ-ಕೀರ್‌ ಮಾತುಕತೆ 

ಈ ಕಾರ್ಯಕ್ರಮವು ವಾರ್ಷಿಕ 24,000 ಕೋಟಿ ರೂಗಳ ವೆಚ್ಚದಲ್ಲಿ 100 ಜಿಲ್ಲೆಗಳನ್ನು ಒಳಗೊಳ್ಳಲಿದೆ. ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಈ ಕಾರ್ಯಕ್ರಮವು ಅಸ್ತಿತ್ವದಲ್ಲಿರುವ 36 ಯೋಜನೆಗಳನ್ನು ಒಟ್ಟುಗೂಡಿಸುತ್ತದೆ ಹಾಗೂ ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಹೆಚ್ಚಿಸುತ್ತದೆ.

ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯು ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುತ್ತದೆ. ನೀರಾವರಿ ಸೌಲಭ್ಯಗಳನ್ನು ಸುಧಾರಿಸುತ್ತದೆ ಹಾಗೂ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮವು 1.7 ಕೋಟಿ ರೈತರಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಹೆಚ್ಚಿಸುವುದು. ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುವುದು, ನೀರಾವರಿ ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ಸಾಲದ ಲಭ್ಯತೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

51 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

2 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

14 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

15 hours ago