Mysore
24
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಮನ್‌ ಕಿ ಬಾತ್‌ನಲ್ಲಿ ಕರ್ನಾಟಕದ ಹುಲಿ ವೇಷ ಕುಣಿತ ಹಾಡಿ ಹೊಗಳಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 119ನೇ ಮನ್‌ ಕಿ ಬಾತ್‌ ಸಂಚಿಕೆ ಇಂದು ಪ್ರಸಾರವಾಯಿತು.

ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನತೆಗೆ ಹಲವು ವಿಷಯಗಳನ್ನು ಹೇಳಿದ್ದಾರೆ.

ಪದೇ ಪದೇ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಕರ್ನಾಟಕದ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಈ ಕರ್ನಾಟಕದ ಜನಪದ ಕಲೆಯಾಗಿರುವ ಹುಲಿ ವೇಷ ಕುಣಿತವನ್ನು ಉಲ್ಲೇಖಿಸಿ ಹುಲಿ ವೇಷ ಹಾಕುವವರನ್ನು ಹಾಡಿ ಹೊಗಳಿದ್ದಾರೆ.

ಈ ಬಗ್ಗೆ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತವೆ.

ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್‌ಟಿ ಅರಣ್ಯವಿದೆ. ಬಿಆರ್‌ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ. ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ಬಹಳ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್‌ ಸ್ಥಳೀಯ ಪೊಲೀಸರಿಗೆ ಸಲ್ಲಬೇಕು ಎಂದು ಹೇಳಿದರು.

ಇದರ ಜೊತೆಗೆ ಆರೋಗ್ಯದ ಕುರಿತು ಕೆಲವು ಸಲಹೆ ನೀಡಿದ ಪ್ರಧಾನಿ ಮೋದಿ ಅವರು, ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. ಎಂಟು ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಶೇಕಡಾ.4ರಷ್ಟು ಇದೆ. ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು. ಆಹಾರದಲ್ಲಿ ಶೇ.10ರಷ್ಟು ಕಡಿಮೆ ಅಡುಗೆ ಎಣ್ಣೆ ಬಳಸಲು ಸಲಹೆ ನೀಡಿದರು.

 

 

Tags:
error: Content is protected !!