ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 119ನೇ ಮನ್ ಕಿ ಬಾತ್ ಸಂಚಿಕೆ ಇಂದು ಪ್ರಸಾರವಾಯಿತು.
ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನತೆಗೆ ಹಲವು ವಿಷಯಗಳನ್ನು ಹೇಳಿದ್ದಾರೆ.
ಪದೇ ಪದೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಈ ಕರ್ನಾಟಕದ ಜನಪದ ಕಲೆಯಾಗಿರುವ ಹುಲಿ ವೇಷ ಕುಣಿತವನ್ನು ಉಲ್ಲೇಖಿಸಿ ಹುಲಿ ವೇಷ ಹಾಕುವವರನ್ನು ಹಾಡಿ ಹೊಗಳಿದ್ದಾರೆ.
ಈ ಬಗ್ಗೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತವೆ.
ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್ಟಿ ಅರಣ್ಯವಿದೆ. ಬಿಆರ್ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ. ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ಬಹಳ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್ ಸ್ಥಳೀಯ ಪೊಲೀಸರಿಗೆ ಸಲ್ಲಬೇಕು ಎಂದು ಹೇಳಿದರು.
ಇದರ ಜೊತೆಗೆ ಆರೋಗ್ಯದ ಕುರಿತು ಕೆಲವು ಸಲಹೆ ನೀಡಿದ ಪ್ರಧಾನಿ ಮೋದಿ ಅವರು, ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. ಎಂಟು ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಶೇಕಡಾ.4ರಷ್ಟು ಇದೆ. ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು. ಆಹಾರದಲ್ಲಿ ಶೇ.10ರಷ್ಟು ಕಡಿಮೆ ಅಡುಗೆ ಎಣ್ಣೆ ಬಳಸಲು ಸಲಹೆ ನೀಡಿದರು.
ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…