ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್ ಕಿ ಬಾತ್ನ 115ರ ಸಂಚಿಕೆಯಲ್ಲಿ ಸೈಬ್ರರ್ ಕ್ರೈಂ ವಂಚನೆ, ಡಿಜಿಟಲ್ ಆರೆಸ್ಟ್ ಇನ್ನಿತರ ನೆಪದಲ್ಲಿ ಬರುವ ಕರೆಗಳಿಂದ ದೂರವಿರಿ ಎಂದು ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮನ್ ಕಿ ಬಾತ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇತ್ತೀಚೆಗೆ ದೇಶದಲ್ಲಿ ಸೈಬರ್ ಕ್ರೈಂ ವಂಚನೆ ಹೆಚ್ಚಾಗಿದೆ. ಡಿಜಿಟಲ್ ಆರೆಸ್ಟ್, ವಿಡಿಯೋ ಕಾಲ್, ಸಿಐಡಿ, ಇಡಿ ಹಾಗೂ ಪೊಲೀಸ್ ತನಿಖೆ ನೆಪದಲ್ಲಿ ಸಾರ್ವಜನಿಕರಿಗೆ ಪದೇ ಪದೇ ಕರೆಗಳು ಬರುತ್ತಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.
ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು, ನಿಮ್ಮ ಬಗ್ಗೆ ಮಾಹಿತಿಯನ್ನು ಕಲೆ ಹಾಕುವ ನೆಪದಲ್ಲಿ ಭಯದ ವಾತಾವರಣ ಸೃಷ್ಠಿಸಿ ನಿಮ್ಮನ್ನು ಹೆದರಿಸುತ್ತಿದ್ದಾರೆ. ಅಲ್ಲದೇ, ಸಮಯದ ಒತ್ತಡ ಹೇರಿ ಬಂಧನದ ಆತಂಕ ನಿರ್ಮಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಡಿಜಿಟಲ್ ಅರೆಸ್ಟ್ ವಂಚನೆಗೆ ಎಲ್ಲಾ ವಯಸ್ಸಿನ ಜನರನ್ನು ಬಳಸುತ್ತಿದ್ದು, ತಮ್ಮ ದುಡಿಮೆಯ ಹಣವನ್ನು ಕಳೆದುಕೊಳ್ಳುವಂತೆ ಮಾಡುತ್ತಿದ್ದಾರೆ. ಹೀಗಾಗಿ ಅಂತಹ ಕರೆ ಬಂದರೆ ಆತಂಕಗೊಳ್ಳಬೇಡಿ. ಕರೆ ಮಾಡಿದವರಿಗೆ ನಿಮ್ಮ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಬೇಡಿ. ಅದರ ಬದಲಾಗಿ ವಿಡಿಯೋ ರೆಕಾರ್ಡ್ ಮಾಡಿಟ್ಟುಕೊಳ್ಳಿ. ಸರ್ಕಾರಿ ತನಿಖಾ ಸಂಸ್ಥೆಗಳು ಯಾವುದೇ ಕಾರಣಕ್ಕೂ ವಿಡಿಯೋ ಕಾಲ್ ಮಾಡಿ ಬೆದರಿಕೆ ಹಾಕುವುದಿಲ್ಲ. ಹೀಗಾಗಿ ಇಂತಹ ಘಟನೆ ನಡೆದರೆ ರಾಷ್ಟ್ರೀಯ ಸೈಬರ್ ಕ್ರೈಂಗೆ ದೂರು ಸಲ್ಲಿಸಿ. ಅಲ್ಲದೇ, ಡಿಜಿಟಲ್ ಆರೆಸ್ಟ್ ಎಂಬುದು ಕಾನೂನು ವ್ಯವಸ್ಥೆಯಲ್ಲಿ ಇಲ್ಲವೇ ಇಲ್ಲ. ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಆ ಕಾರಣಕ್ಕೆ ಕರೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜೊತೆಗೆ ಅವರ ಸಿಮ್ ಅನ್ನು ಕೂಡ ಬಂದ್ ಮಾಡಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…