ದೇಶ- ವಿದೇಶ

ಮನ್‌ ಕಿ ಬಾತ್‌: ರಾಜ್ಯ ಸೈಬರ್‌ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಪ್ರಧಾನಿ ಮೋದಿ ಜಾಗೃತಿ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್‌ ಕಿ ಬಾತ್‌ನ 115ರ ಸಂಚಿಕೆಯಲ್ಲಿ ಸೈಬ್ರರ್‌ ಕ್ರೈಂ ವಂಚನೆ, ಡಿಜಿಟಲ್‌ ಆರೆಸ್ಟ್‌ ಇನ್ನಿತರ ನೆಪದಲ್ಲಿ ಬರುವ ಕರೆಗಳಿಂದ ದೂರವಿರಿ ಎಂದು ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇತ್ತೀಚೆಗೆ ದೇಶದಲ್ಲಿ ಸೈಬರ್‌ ಕ್ರೈಂ ವಂಚನೆ ಹೆಚ್ಚಾಗಿದೆ. ಡಿಜಿಟಲ್‌ ಆರೆಸ್ಟ್‌, ವಿಡಿಯೋ ಕಾಲ್‌, ಸಿಐಡಿ, ಇಡಿ ಹಾಗೂ ಪೊಲೀಸ್‌ ತನಿಖೆ ನೆಪದಲ್ಲಿ ಸಾರ್ವಜನಿಕರಿಗೆ ಪದೇ ಪದೇ ಕರೆಗಳು ಬರುತ್ತಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.

ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು, ನಿಮ್ಮ ಬಗ್ಗೆ ಮಾಹಿತಿಯನ್ನು ಕಲೆ ಹಾಕುವ ನೆಪದಲ್ಲಿ ಭಯದ ವಾತಾವರಣ ಸೃಷ್ಠಿಸಿ ನಿಮ್ಮನ್ನು ಹೆದರಿಸುತ್ತಿದ್ದಾರೆ. ಅಲ್ಲದೇ, ಸಮಯದ ಒತ್ತಡ ಹೇರಿ ಬಂಧನದ ಆತಂಕ ನಿರ್ಮಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಎಲ್ಲಾ ವಯಸ್ಸಿನ ಜನರನ್ನು ಬಳಸುತ್ತಿದ್ದು, ತಮ್ಮ ದುಡಿಮೆಯ ಹಣವನ್ನು ಕಳೆದುಕೊಳ್ಳುವಂತೆ ಮಾಡುತ್ತಿದ್ದಾರೆ. ಹೀಗಾಗಿ ಅಂತಹ ಕರೆ ಬಂದರೆ ಆತಂಕಗೊಳ್ಳಬೇಡಿ. ಕರೆ ಮಾಡಿದವರಿಗೆ ನಿಮ್ಮ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಬೇಡಿ. ಅದರ ಬದಲಾಗಿ ವಿಡಿಯೋ ರೆಕಾರ್ಡ್‌ ಮಾಡಿಟ್ಟುಕೊಳ್ಳಿ. ಸರ್ಕಾರಿ ತನಿಖಾ ಸಂಸ್ಥೆಗಳು ಯಾವುದೇ ಕಾರಣಕ್ಕೂ ವಿಡಿಯೋ ಕಾಲ್‌ ಮಾಡಿ ಬೆದರಿಕೆ ಹಾಕುವುದಿಲ್ಲ. ಹೀಗಾಗಿ ಇಂತಹ ಘಟನೆ ನಡೆದರೆ ರಾಷ್ಟ್ರೀಯ ಸೈಬರ್‌ ಕ್ರೈಂಗೆ ದೂರು ಸಲ್ಲಿಸಿ. ಅಲ್ಲದೇ, ಡಿಜಿಟಲ್‌ ಆರೆಸ್ಟ್‌ ಎಂಬುದು ಕಾನೂನು ವ್ಯವಸ್ಥೆಯಲ್ಲಿ ಇಲ್ಲವೇ ಇಲ್ಲ. ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಆ ಕಾರಣಕ್ಕೆ ಕರೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜೊತೆಗೆ ಅವರ ಸಿಮ್‌ ಅನ್ನು ಕೂಡ ಬಂದ್‌ ಮಾಡಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

10 mins ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

36 mins ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

1 hour ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

2 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

3 hours ago