ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್ ಕಿ ಬಾತ್ನ 115ರ ಸಂಚಿಕೆಯಲ್ಲಿ ಸೈಬ್ರರ್ ಕ್ರೈಂ ವಂಚನೆ, ಡಿಜಿಟಲ್ ಆರೆಸ್ಟ್ ಇನ್ನಿತರ ನೆಪದಲ್ಲಿ ಬರುವ ಕರೆಗಳಿಂದ ದೂರವಿರಿ ಎಂದು ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮನ್ ಕಿ ಬಾತ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇತ್ತೀಚೆಗೆ ದೇಶದಲ್ಲಿ ಸೈಬರ್ ಕ್ರೈಂ ವಂಚನೆ ಹೆಚ್ಚಾಗಿದೆ. ಡಿಜಿಟಲ್ ಆರೆಸ್ಟ್, ವಿಡಿಯೋ ಕಾಲ್, ಸಿಐಡಿ, ಇಡಿ ಹಾಗೂ ಪೊಲೀಸ್ ತನಿಖೆ ನೆಪದಲ್ಲಿ ಸಾರ್ವಜನಿಕರಿಗೆ ಪದೇ ಪದೇ ಕರೆಗಳು ಬರುತ್ತಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.
ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು, ನಿಮ್ಮ ಬಗ್ಗೆ ಮಾಹಿತಿಯನ್ನು ಕಲೆ ಹಾಕುವ ನೆಪದಲ್ಲಿ ಭಯದ ವಾತಾವರಣ ಸೃಷ್ಠಿಸಿ ನಿಮ್ಮನ್ನು ಹೆದರಿಸುತ್ತಿದ್ದಾರೆ. ಅಲ್ಲದೇ, ಸಮಯದ ಒತ್ತಡ ಹೇರಿ ಬಂಧನದ ಆತಂಕ ನಿರ್ಮಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಡಿಜಿಟಲ್ ಅರೆಸ್ಟ್ ವಂಚನೆಗೆ ಎಲ್ಲಾ ವಯಸ್ಸಿನ ಜನರನ್ನು ಬಳಸುತ್ತಿದ್ದು, ತಮ್ಮ ದುಡಿಮೆಯ ಹಣವನ್ನು ಕಳೆದುಕೊಳ್ಳುವಂತೆ ಮಾಡುತ್ತಿದ್ದಾರೆ. ಹೀಗಾಗಿ ಅಂತಹ ಕರೆ ಬಂದರೆ ಆತಂಕಗೊಳ್ಳಬೇಡಿ. ಕರೆ ಮಾಡಿದವರಿಗೆ ನಿಮ್ಮ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಬೇಡಿ. ಅದರ ಬದಲಾಗಿ ವಿಡಿಯೋ ರೆಕಾರ್ಡ್ ಮಾಡಿಟ್ಟುಕೊಳ್ಳಿ. ಸರ್ಕಾರಿ ತನಿಖಾ ಸಂಸ್ಥೆಗಳು ಯಾವುದೇ ಕಾರಣಕ್ಕೂ ವಿಡಿಯೋ ಕಾಲ್ ಮಾಡಿ ಬೆದರಿಕೆ ಹಾಕುವುದಿಲ್ಲ. ಹೀಗಾಗಿ ಇಂತಹ ಘಟನೆ ನಡೆದರೆ ರಾಷ್ಟ್ರೀಯ ಸೈಬರ್ ಕ್ರೈಂಗೆ ದೂರು ಸಲ್ಲಿಸಿ. ಅಲ್ಲದೇ, ಡಿಜಿಟಲ್ ಆರೆಸ್ಟ್ ಎಂಬುದು ಕಾನೂನು ವ್ಯವಸ್ಥೆಯಲ್ಲಿ ಇಲ್ಲವೇ ಇಲ್ಲ. ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಆ ಕಾರಣಕ್ಕೆ ಕರೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜೊತೆಗೆ ಅವರ ಸಿಮ್ ಅನ್ನು ಕೂಡ ಬಂದ್ ಮಾಡಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…