ಆಂಧ್ರಪ್ರದೇಶ: ವಿಶಾಖಪಟ್ಟಣಂನ ಸಮುದ್ರ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು 3 ಲಕ್ಷ ಜನರೊಂದಿಗೆ ಯೋಗ ಮಾಡುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ.
ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದಡಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ವಿಶಾಖಪಟ್ಟಣಂನಲ್ಲಿ ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 3 ಲಕ್ಷ ಜನರೊಂದಿಗೆ ಯೋಗ ಮಾಡಿದರು. 25,000 ವಿದ್ಯಾರ್ಥಿಗಳು 108 ನಿಮಿಷ ಸೂರ್ಯ ನಮಸ್ಕಾರ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ವೇ ಭವಂತು ಸುಖಿನಃ. ನಾವು ಈ ಚಿಂತನೆಯಿಂದ ಬದುಕಬೇಕು. ಏಕೆಂದರೆ ಇದು ಶಾಂತಿಯುತ ಸಮಾಜಕ್ಕೆ ಕಾರಣವಾಗುತ್ತದೆ. ದುರದೃಷ್ಟವಶಾಥತ್ ಇಂದು ಜಗತ್ತು ವ್ಯಾಪಕ ಹಿಂಸೆ ಹಾಗೂ ಅಶಾಂತಿಗೆ ಸಾಕ್ಷಿಯಾಗುತ್ತಿದೆ. ಯೋಗವು ಮಾನವೀಯತೆಯು ಉಸಿರಾಡಲು, ಸಮತೋಲನವನ್ನು ಕಂಡುಕೊಳ್ಳಲು ಮತ್ತು ಶಾಂತತೆಯನ್ನು ಮರಳಿ ಪಡೆಯಲು ಯೋಗ ಅಗತ್ಯವಾಗಿದೆ ಎಂದು ಹೇಳಿದರು.
ಇನ್ನು ಯೋಗ ಕಾರ್ಯಕ್ರಮಕ್ಕೆ ಭಾರೀ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿತ್ತು. 10,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇಡೀ ಮಾರ್ಗದುದ್ದಕ್ಕೂ 1200 ಸಿಸಿ ಕ್ಯಾಮರಾಗಳು ಮತ್ತು ಡ್ರೋನ್ ಮೂಲಕ ಕಣ್ಗಾವಲಿನಲ್ಲಿಡಲಾಗಿತ್ತು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…