ದೇಶ- ವಿದೇಶ

ಇಳುವರಿ ಹೆಚ್ಚಿಸುವ 109 ಪ್ರಭೇದಗಳ ಬೀಜಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಅಧಿಕ ಇಳುವರಿ ಮತ್ತು ಪೌಷ್ಠಿಕಾಂಶ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ವಿವಿಧ ವಾತಾವರಣಗಳಲ್ಲಿ ಬೆಳೆಯಬಹುದಾದ ಹಾಗೂ ಒಣ ಬೇಸಾಯ ಹಾಗೂ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ 109 ಪ್ರಭೇದಗಳ ಬೀಜಗಳನ್ನು ಬಿಡುಗಡೆ ಮಾಡಿದ್ದಾರೆ.

ಈ ಬೀಜಗಳಿಂದ ಬೆಳೆಯುವ ಬೆಳೆ ಅತೀ ಹೆಚ್ಚು ಉತ್ಪಾದನೆ ಹೆಚ್ಚಿಸುವ ಮೂಲಕ ರೈತರ ಆದಾಯವನ್ನು ವೃದ್ಧಿಸುತ್ತದೆ.

ಈ ಪ್ರಭೇದಗಳ 34 ಧಾನ್ಯಗಳನ್ನು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಇಲ್ಲಿ 27 ತೋಟಗಾರಿಕೆ ಬೆಳೆಗಳು ಸಹ ಇವೆ.

ಬೇಳೆ ಕಾಳುಗಳು, ಧಾನ್ಯಗಳು, ಎಣ್ಣೆ ಕಾಳುಗಳು, ಹತ್ತಿ, ಕಬ್ಬು, ಮೇವು, ವಿವಿಧ ಹಣ್ಣುಗಳು, ತರಕಾರಿ, ಹೂವು, ಮಸಾಲೆ ಪದಾರ್ಥಗಳು, ಔಷಧಿ ಸಸ್ಯ ಸೇರಿದಂತೆ ಹಲವು ಬೀಜಗಳು ಇದರಲ್ಲಿವೆ.

ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಕ್ರಮ ಕೈಗೊಂಡಿದ್ದು, ಹವಾಮಾನ ವೈಪರೀತ್ಯಗಳನ್ನು ತಡೆಯಬಲ್ಲ ವಿಧಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.

ಈ ಮೂಲಕ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಮತ್ತು ಅಂಗನವಾಡಿಯಲ್ಲಿ ಪೌಷ್ಠಿಕಾಂಶ ಕೊರತೆ ಹೋಗಲಾಡಿಸಲು ಸಹ ಪ್ರಧಾನಿ ಮೋದಿ ಕ್ರಮ ಕೈಗೊಂಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರವಾಸಿತಾಣ ಉತ್ತೇಜಿಸಲು ಪ್ರವಾಸಿ ಗೈಡ್‌, ಮ್ಯಾಪ್‌ ಸಿದ್ದ : ಮಂಡ್ಯದಲ್ಲಿ 106 ಪ್ರವಾಸಿ ತಾಣಗಳ ಪರಿಗಣನೆ

ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…

7 mins ago

ಕೆ.ಆರ್‌.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು

ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…

13 mins ago

ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ…

15 mins ago

ಬಿದ್ದಾಟಂಡ ವಾಡೆಯಲ್ಲಿ ಸಂಭ್ರಮದ ಪುತ್ತರಿ ಕೋಲಾಟ

ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.…

18 mins ago

ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…

36 mins ago

ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್‌ ಸಲಹೆ

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…

44 mins ago