ನವದೆಹಲಿ: ಅಧಿಕ ಇಳುವರಿ ಮತ್ತು ಪೌಷ್ಠಿಕಾಂಶ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ವಿವಿಧ ವಾತಾವರಣಗಳಲ್ಲಿ ಬೆಳೆಯಬಹುದಾದ ಹಾಗೂ ಒಣ ಬೇಸಾಯ ಹಾಗೂ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ 109 ಪ್ರಭೇದಗಳ ಬೀಜಗಳನ್ನು ಬಿಡುಗಡೆ ಮಾಡಿದ್ದಾರೆ.
ಈ ಬೀಜಗಳಿಂದ ಬೆಳೆಯುವ ಬೆಳೆ ಅತೀ ಹೆಚ್ಚು ಉತ್ಪಾದನೆ ಹೆಚ್ಚಿಸುವ ಮೂಲಕ ರೈತರ ಆದಾಯವನ್ನು ವೃದ್ಧಿಸುತ್ತದೆ.
ಈ ಪ್ರಭೇದಗಳ 34 ಧಾನ್ಯಗಳನ್ನು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಇಲ್ಲಿ 27 ತೋಟಗಾರಿಕೆ ಬೆಳೆಗಳು ಸಹ ಇವೆ.
ಬೇಳೆ ಕಾಳುಗಳು, ಧಾನ್ಯಗಳು, ಎಣ್ಣೆ ಕಾಳುಗಳು, ಹತ್ತಿ, ಕಬ್ಬು, ಮೇವು, ವಿವಿಧ ಹಣ್ಣುಗಳು, ತರಕಾರಿ, ಹೂವು, ಮಸಾಲೆ ಪದಾರ್ಥಗಳು, ಔಷಧಿ ಸಸ್ಯ ಸೇರಿದಂತೆ ಹಲವು ಬೀಜಗಳು ಇದರಲ್ಲಿವೆ.
ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಕ್ರಮ ಕೈಗೊಂಡಿದ್ದು, ಹವಾಮಾನ ವೈಪರೀತ್ಯಗಳನ್ನು ತಡೆಯಬಲ್ಲ ವಿಧಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.
ಈ ಮೂಲಕ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಮತ್ತು ಅಂಗನವಾಡಿಯಲ್ಲಿ ಪೌಷ್ಠಿಕಾಂಶ ಕೊರತೆ ಹೋಗಲಾಡಿಸಲು ಸಹ ಪ್ರಧಾನಿ ಮೋದಿ ಕ್ರಮ ಕೈಗೊಂಡಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…