ನವದೆಹಲಿ: ಅಧಿಕ ಇಳುವರಿ ಮತ್ತು ಪೌಷ್ಠಿಕಾಂಶ ವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ವಿವಿಧ ವಾತಾವರಣಗಳಲ್ಲಿ ಬೆಳೆಯಬಹುದಾದ ಹಾಗೂ ಒಣ ಬೇಸಾಯ ಹಾಗೂ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದ 109 ಪ್ರಭೇದಗಳ ಬೀಜಗಳನ್ನು ಬಿಡುಗಡೆ ಮಾಡಿದ್ದಾರೆ.
ಈ ಬೀಜಗಳಿಂದ ಬೆಳೆಯುವ ಬೆಳೆ ಅತೀ ಹೆಚ್ಚು ಉತ್ಪಾದನೆ ಹೆಚ್ಚಿಸುವ ಮೂಲಕ ರೈತರ ಆದಾಯವನ್ನು ವೃದ್ಧಿಸುತ್ತದೆ.
ಈ ಪ್ರಭೇದಗಳ 34 ಧಾನ್ಯಗಳನ್ನು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಇಲ್ಲಿ 27 ತೋಟಗಾರಿಕೆ ಬೆಳೆಗಳು ಸಹ ಇವೆ.
ಬೇಳೆ ಕಾಳುಗಳು, ಧಾನ್ಯಗಳು, ಎಣ್ಣೆ ಕಾಳುಗಳು, ಹತ್ತಿ, ಕಬ್ಬು, ಮೇವು, ವಿವಿಧ ಹಣ್ಣುಗಳು, ತರಕಾರಿ, ಹೂವು, ಮಸಾಲೆ ಪದಾರ್ಥಗಳು, ಔಷಧಿ ಸಸ್ಯ ಸೇರಿದಂತೆ ಹಲವು ಬೀಜಗಳು ಇದರಲ್ಲಿವೆ.
ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಕ್ರಮ ಕೈಗೊಂಡಿದ್ದು, ಹವಾಮಾನ ವೈಪರೀತ್ಯಗಳನ್ನು ತಡೆಯಬಲ್ಲ ವಿಧಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.
ಈ ಮೂಲಕ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಮತ್ತು ಅಂಗನವಾಡಿಯಲ್ಲಿ ಪೌಷ್ಠಿಕಾಂಶ ಕೊರತೆ ಹೋಗಲಾಡಿಸಲು ಸಹ ಪ್ರಧಾನಿ ಮೋದಿ ಕ್ರಮ ಕೈಗೊಂಡಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…