ನವದೆಹಲಿ: ಪೋಲೆಂಡ್ ಹಾಗೂ ಉಕ್ರೇನ್ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ವಾಪಸ್ ಆಗಿದ್ದಾರೆ.
2 ದಿನಗಳ ಉಕ್ರೇನ್ ಮತ್ತು ಪೋಲೆಂಡ್ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಮಧ್ಯಾಹ್ನ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಭಾರತದ ಪ್ರಧಾನಿಯೊಬ್ಬರು 45 ವರ್ಷಗಳ ಬಳಿಕ ಪೋಲೆಂಡ್ಗೆ ನೀಡಿದ ಭೇಟಿ ಇದಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು, ಉಕ್ರೇನ್ಗೆ ಭೇಟಿ ನೀಡಿ ವೊಲೊಡಿಮಿರ್ ಝಲೆನ್ಸ್ಕಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ದ್ವಿಪಕ್ಷೀಯ ವಿಚಾರದ ಕುರಿತು ಚರ್ಚೆ ನಡೆಸಿದ ಅವರು, ಸಮುದಾಯ ಅಭಿವೃದ್ಧಿ ಯೋಜನೆಗಳು, ಔಷಧ ನಿಯಂತ್ರಣ ಮಾನದಂಡಗಳು, ಸಾಂಸ್ಕೃತಿಕ ವಿನಿಮಯ ಮತ್ತು ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ನಾಲ್ಕು ತಿಳುವಳಿಕಾ ಒಪ್ಪಂದಗಳಿಗೆ ಸಹಿ ಹಾಕಿದರು.
ಇನ್ನು ನಾಗರಿಕರಿಬ್ಬರು ಜಾಗತಿಕ ವಿಷಯಗಳ ಬಗ್ಗೆ ಕುರಿತು ಮಾತನಾಡಿ, ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳು ಸೇರಿದಂತೆ ಹಿತಾಸಕ್ತಿಯನ್ನು ಪರಸ್ಪರ ವಿನಿಮಯ ಮಾಡಿಕೊಂಡರು.
ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಕೊನೆಗೊಳಿಸುವ ಪ್ರಯತ್ನದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ ಹೇಳಿದ್ದಾರೆ. ಇನ್ನು ಕೀವ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಝಲೆನ್ಸ್ಕಿಯವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…