ದೇಶ- ವಿದೇಶ

ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ್ದಾರೆ.

ಇಂದು ಬೆಳಿಗ್ಗೆ ಪಾಲಂ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದು, ಎಂಟು ದಿನಗಳ ಪ್ರವಾಸದಲ್ಲಿ ಘಾನಾ, ಟ್ರನಿಡಾಡ್‌ ಮತ್ತು ಟೊಬೆಗೊ, ಅರ್ಜೆಂಟೀನಾ, ಬ್ರೆಜಿಲ್‌ ಮತ್ತು ನಮೀಬಿಯಾ ಸೇರಿದಂತೆ ಐದು ದೇಶಗಳಿಗೆ ಭೇಟಿ ನೀಡಿದ್ದರು.

ಪ್ರಧಾನಿ ಮೋದಿ ಅವರಿಗೆ ಘಾನಾದ ಅತ್ಯುನ್ನತ ನಾಗರಿಕ ದಿ ಆಫೀಸರ್‌ ಆಫ್‌ ದಿ ಆರ್ಡರ್‌ ಆಫ್‌ ದಿ ಸ್ಟಾರ್‌ ಆಫ್‌ ಘಾನಾ ನೀಡಿ ಗೌರವಿಸಲಾಗಿತ್ತು.

ಟೊಬೆಗೊ ಅಧ್ಯಕ್ಷ ಕ್ರಿಸ್ಟೀನ್‌ ಕಂಗಲೂ ಅವರು ಮೋದಿಗೆ ಟ್ರಿನಿಡಾಡ್‌ ಮತ್ತು ಟೊಬೆಗೊದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ದಿ ಆರ್ಡರ್‌ ಆಫ್‌ ದಿ ರಿಪಬ್ಲಿಕ್‌ ಆಫ್‌ ಟ್ರಿನಿಡಾಡ್‌ ಮತ್ತು ಟೊಬೆಗೊ ಅನ್ನು ಪ್ರದಾನ ಮಾಡಿದರು.

ಬಳಿಕ ನಮಿಬಿಯಾಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲೂ ಕೂಡ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್‌ ಆಫ್‌ ದಿ ಮೋಸ್ಟ್‌ ಏನ್ಷಿಯಂಟ್‌ ವೆಲ್ವಿಟ್ಟಿಯಾ ಮಿರಾಬಿಲಿಸ್‌ ನೀಡಿ ಗೌರವಿಸಲಾಯಿತು.

ಇನ್ನು ಬ್ರೆಜಿಲ್‌ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್‌ ಅಧ್ಯಕ್ಷ ಲೂಯಿಸ್‌ ಇನಾಸಿಯೊ ಲುಲಾ ಡ ಸಿಲ್ವಾ ಅವರು ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್‌ ಕಾಲರ್‌ ಆಫ್‌ ದಿ ನ್ಯಾಷನಲ್‌ ಆರ್ಡರ್‌ ಆಫ್‌ ದಿ ಸದರ್ನ್‌ ಕ್ರಾಸ್‌ ಪ್ರಶಸ್ತಿ ಪ್ರದಾನ ಮಾಡಿದರು.

ಆಂದೋಲನ ಡೆಸ್ಕ್

Recent Posts

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

3 mins ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

15 mins ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

2 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

2 hours ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

2 hours ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

2 hours ago