ಪಾಕಿಸ್ತಾನಕ್ಕೆ ಕಟು ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು.

ಈ ಘಟನೆ ನಡೆಯುತ್ತಿದ್ದಂತೆ ಪಾಕ್‌ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಸರ್ಕಾರ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದು, ಹಲವು ಮಂದಿ ಭಯೋತ್ಪಾದಕರು ಹಾಗೂ ಅವರ ಆಶ್ರಯ ತಾಣಗಳನ್ನು ಧ್ವಂಸ ಮಾಡಿದೆ.

ಭಾರತ-ಪಾಕ್‌ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪಾಕ್‌ ಮಾತ್ರ ನರಿ ಬುದ್ಧಿಯನ್ನು ಬಿಡುವ ಹಾಗೆ ಕಾಣುತ್ತಿಲ್ಲ. ಪದೇ ಪದೇ ಶೆಲ್‌ ದಾಳಿ ಮಾಡುತ್ತಿದ್ದು, ಕಾಶ್ಮೀರದಲ್ಲಿ ಅಮಾಯಕ ನಾಗರಿಕರ ಸಾವಿಗೆ ಕಾರಣವಾಗುತ್ತಿದೆ. ಇದರಿಂದ ರೊಚ್ಚಿಗೆದ್ದಿರುವ ಭಾರತೀಯ ಸೇನೆ ಪಾಕ್‌ ಮೇಲೆ ಕ್ಷಿಪಣಿ ದಾಳಿ ಮುಂದುವರಿಸಿದ್ದು, ಪಾಕ್‌ ಪತರುಗುಟ್ಟುವಂತೆ ಮಾಡಿದೆ.

ಈ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು, ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಹಾಗೂ ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಿದ್ದು, ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದೆ. ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪಾಕಿಸ್ತಾನಕ್ಕೆ ಕಟು ಸಂದೇಶ ರವಾನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

25 mins ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

4 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

4 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

4 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

4 hours ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

4 hours ago