ನವದೆಹಲಿ: ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು.
ಈ ಘಟನೆ ನಡೆಯುತ್ತಿದ್ದಂತೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದು, ಹಲವು ಮಂದಿ ಭಯೋತ್ಪಾದಕರು ಹಾಗೂ ಅವರ ಆಶ್ರಯ ತಾಣಗಳನ್ನು ಧ್ವಂಸ ಮಾಡಿದೆ.
ಭಾರತ-ಪಾಕ್ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪಾಕ್ ಮಾತ್ರ ನರಿ ಬುದ್ಧಿಯನ್ನು ಬಿಡುವ ಹಾಗೆ ಕಾಣುತ್ತಿಲ್ಲ. ಪದೇ ಪದೇ ಶೆಲ್ ದಾಳಿ ಮಾಡುತ್ತಿದ್ದು, ಕಾಶ್ಮೀರದಲ್ಲಿ ಅಮಾಯಕ ನಾಗರಿಕರ ಸಾವಿಗೆ ಕಾರಣವಾಗುತ್ತಿದೆ. ಇದರಿಂದ ರೊಚ್ಚಿಗೆದ್ದಿರುವ ಭಾರತೀಯ ಸೇನೆ ಪಾಕ್ ಮೇಲೆ ಕ್ಷಿಪಣಿ ದಾಳಿ ಮುಂದುವರಿಸಿದ್ದು, ಪಾಕ್ ಪತರುಗುಟ್ಟುವಂತೆ ಮಾಡಿದೆ.
ಈ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು, ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಹಾಗೂ ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಿದ್ದು, ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದೆ. ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪಾಕಿಸ್ತಾನಕ್ಕೆ ಕಟು ಸಂದೇಶ ರವಾನೆ ಮಾಡಿದ್ದಾರೆ.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…