ಪಾಕಿಸ್ತಾನಕ್ಕೆ ಕಟು ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು.

ಈ ಘಟನೆ ನಡೆಯುತ್ತಿದ್ದಂತೆ ಪಾಕ್‌ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಸರ್ಕಾರ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದು, ಹಲವು ಮಂದಿ ಭಯೋತ್ಪಾದಕರು ಹಾಗೂ ಅವರ ಆಶ್ರಯ ತಾಣಗಳನ್ನು ಧ್ವಂಸ ಮಾಡಿದೆ.

ಭಾರತ-ಪಾಕ್‌ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪಾಕ್‌ ಮಾತ್ರ ನರಿ ಬುದ್ಧಿಯನ್ನು ಬಿಡುವ ಹಾಗೆ ಕಾಣುತ್ತಿಲ್ಲ. ಪದೇ ಪದೇ ಶೆಲ್‌ ದಾಳಿ ಮಾಡುತ್ತಿದ್ದು, ಕಾಶ್ಮೀರದಲ್ಲಿ ಅಮಾಯಕ ನಾಗರಿಕರ ಸಾವಿಗೆ ಕಾರಣವಾಗುತ್ತಿದೆ. ಇದರಿಂದ ರೊಚ್ಚಿಗೆದ್ದಿರುವ ಭಾರತೀಯ ಸೇನೆ ಪಾಕ್‌ ಮೇಲೆ ಕ್ಷಿಪಣಿ ದಾಳಿ ಮುಂದುವರಿಸಿದ್ದು, ಪಾಕ್‌ ಪತರುಗುಟ್ಟುವಂತೆ ಮಾಡಿದೆ.

ಈ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು, ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಹಾಗೂ ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಿದ್ದು, ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದೆ. ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪಾಕಿಸ್ತಾನಕ್ಕೆ ಕಟು ಸಂದೇಶ ರವಾನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

3 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

3 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

3 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

3 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

3 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

3 hours ago