ಪಾಕಿಸ್ತಾನಕ್ಕೆ ಕಟು ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು.

ಈ ಘಟನೆ ನಡೆಯುತ್ತಿದ್ದಂತೆ ಪಾಕ್‌ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಸರ್ಕಾರ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದು, ಹಲವು ಮಂದಿ ಭಯೋತ್ಪಾದಕರು ಹಾಗೂ ಅವರ ಆಶ್ರಯ ತಾಣಗಳನ್ನು ಧ್ವಂಸ ಮಾಡಿದೆ.

ಭಾರತ-ಪಾಕ್‌ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪಾಕ್‌ ಮಾತ್ರ ನರಿ ಬುದ್ಧಿಯನ್ನು ಬಿಡುವ ಹಾಗೆ ಕಾಣುತ್ತಿಲ್ಲ. ಪದೇ ಪದೇ ಶೆಲ್‌ ದಾಳಿ ಮಾಡುತ್ತಿದ್ದು, ಕಾಶ್ಮೀರದಲ್ಲಿ ಅಮಾಯಕ ನಾಗರಿಕರ ಸಾವಿಗೆ ಕಾರಣವಾಗುತ್ತಿದೆ. ಇದರಿಂದ ರೊಚ್ಚಿಗೆದ್ದಿರುವ ಭಾರತೀಯ ಸೇನೆ ಪಾಕ್‌ ಮೇಲೆ ಕ್ಷಿಪಣಿ ದಾಳಿ ಮುಂದುವರಿಸಿದ್ದು, ಪಾಕ್‌ ಪತರುಗುಟ್ಟುವಂತೆ ಮಾಡಿದೆ.

ಈ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು, ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಹಾಗೂ ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಿದ್ದು, ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದೆ. ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪಾಕಿಸ್ತಾನಕ್ಕೆ ಕಟು ಸಂದೇಶ ರವಾನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

55 mins ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

56 mins ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

58 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

1 hour ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

4 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

4 hours ago