ದೇಶ- ವಿದೇಶ

ಹೂಗ್ಲಿ ನದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ.

ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದರು.

ಏಪ್ರಿಲ್.‌29ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

ಇಂದು ಬೆಳಿಗ್ಗೆ ಕೋಲ್ಕತ್ತಾದ ಗಂಗಾ ನದಿಯ ಉಪನದಿಯಾಗಿರುವ ಹೂಗ್ಲಿ ನದಿಯಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ದೋಣಿ ವಿಹಾರವನ್ನು ಆನಂದಿಸಿದ್ದಾರೆ. ಈ ಫೋಟೋಗಳನ್ನು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಬರೆದುಕೊಂಡಿರುವ ಪ್ರಧಾನಿ ಮೋದಿ ಅವರು, ಪ್ರತಿಯೊಬ್ಬ ಬಂಗಾಳಿಗನಿಗೂ ಗಂಗಾ ನದಿ ಬಹಳ ವಿಶೇಷ ಹಾಗೂ ಪವಿತ್ರವಾದ ಸ್ಥಾನವನ್ನು ಹೊಂದಿದೆ. ಗಂಗಾ ಕೇವಲ ನದಿಯಾಗಿರದೇ ಇಲ್ಲಿನ ಸಂಸ್ಕೃತಿ, ಇತಿಹಾಸ, ಜೀವನಶೈಲಿಯನ್ನು ಎತ್ತಿತೋರಿಸುವ ಬಂಗಾಳದ ಆತ್ಮದ ಮೂಲಕ ಹರಿಯುತ್ತದೆ. ಇಲ್ಲಿನ ನೀರು ನಾಗರಿಕತೆಯ ಚೈತನ್ಯವನ್ನು ಹೊತ್ತೊಯ್ಯುತ್ತದೆ. ಇಂದು ಬೆಳಿಗ್ಗೆ ನಾನು ಕೋಲ್ಕತ್ತಾದ ಹೂಗ್ಲಿ ನದಿಯ ದಡದಲ್ಲಿ ಸ್ವಲ್ಪ ಸಮಯ ಕಳೆದು, ಗಂಗಾ ಮಾತೆಗೆ ಕೃತಜ್ಞತೆ ಸಲ್ಲಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

5 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

6 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

7 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

8 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

8 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

9 hours ago