ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ.
ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದರು.
ಏಪ್ರಿಲ್.29ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.
ಇಂದು ಬೆಳಿಗ್ಗೆ ಕೋಲ್ಕತ್ತಾದ ಗಂಗಾ ನದಿಯ ಉಪನದಿಯಾಗಿರುವ ಹೂಗ್ಲಿ ನದಿಯಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ದೋಣಿ ವಿಹಾರವನ್ನು ಆನಂದಿಸಿದ್ದಾರೆ. ಈ ಫೋಟೋಗಳನ್ನು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಬರೆದುಕೊಂಡಿರುವ ಪ್ರಧಾನಿ ಮೋದಿ ಅವರು, ಪ್ರತಿಯೊಬ್ಬ ಬಂಗಾಳಿಗನಿಗೂ ಗಂಗಾ ನದಿ ಬಹಳ ವಿಶೇಷ ಹಾಗೂ ಪವಿತ್ರವಾದ ಸ್ಥಾನವನ್ನು ಹೊಂದಿದೆ. ಗಂಗಾ ಕೇವಲ ನದಿಯಾಗಿರದೇ ಇಲ್ಲಿನ ಸಂಸ್ಕೃತಿ, ಇತಿಹಾಸ, ಜೀವನಶೈಲಿಯನ್ನು ಎತ್ತಿತೋರಿಸುವ ಬಂಗಾಳದ ಆತ್ಮದ ಮೂಲಕ ಹರಿಯುತ್ತದೆ. ಇಲ್ಲಿನ ನೀರು ನಾಗರಿಕತೆಯ ಚೈತನ್ಯವನ್ನು ಹೊತ್ತೊಯ್ಯುತ್ತದೆ. ಇಂದು ಬೆಳಿಗ್ಗೆ ನಾನು ಕೋಲ್ಕತ್ತಾದ ಹೂಗ್ಲಿ ನದಿಯ ದಡದಲ್ಲಿ ಸ್ವಲ್ಪ ಸಮಯ ಕಳೆದು, ಗಂಗಾ ಮಾತೆಗೆ ಕೃತಜ್ಞತೆ ಸಲ್ಲಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…