ದೇಶ- ವಿದೇಶ

ಪ್ರಧಾನಿ ಅಭ್ಯರ್ಥಿ: ನನ್ನ ಆಯ್ಕೆ ರಾಹುಲ್‌ ಎಂದ ಖರ್ಗೆ

ನವದೆಹಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಇಂಡಿಯ ಬಣ ಖಚಿತವಾಗಿ ಉತ್ತರ ನೀಡಿರಲಿಲ್ಲ. ಚುನಾವಣೆ ಮುಗಿದು ಫಲಿತಾಂಶದ ಬಳಿಕ ಇಂಡಿಯಾ ಬಣ ಗೆದ್ದರೆ ಆ ನಂತರ ಪ್ರಧಾನಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಮೈತ್ರಿ ಕೂಟದ ನಾಯಕರು ಹೇಳುತ್ತಿದ್ದರು. ಆದರೆ, ಇದೀಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಿ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್‌ ಗಾಂಧಿ ನನ್ನ ಆಯ್ಕೆ ಎಂದಿದ್ದಾರೆ.

ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಅಭ್ಯರ್ಥಿ ಹುದ್ದೆಗೆ ರಾಹುಲ್‌ ಗಾಂಧಿ ನನ್ನ ಆಯ್ಕೆ ಎಂದು ಹೇಳುವ ಮೂಲಕ ಖರ್ಗೆ ರಾಹುಲ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎನ್‌ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಎರಡು ಬಾರಿ ಭಾರತ್‌ ಜೋಡೊ ಯಾತ್ರೆ ಕೈಗೊಂಡಿದ್ದು, ಈ ಬಾರಿಯ ಚುನಾವಣೆಗೆ ಸಾಕಷ್ಟು ನೆರವಾಯಿತು. ಈ ನಡುವೆ ಹಲವು ಪಕ್ಷಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದೇವೆ. ಮೋದಿ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿ, ಎದುರಿಸಿದ ರೀತಿಯಿಂದಾಗಿ ಅವರೇ ಪ್ರಧಾನಿ ಹುದ್ದೆಗೆ ಸೂಕ್ತ ಎಂದಿದ್ದಾರೆ.

ರಾಹುಲ್‌ ದೇಶದ ಉದ್ದಗಲಕ್ಕೂ ಯುವ ಸಮೂಹವನ್ನು ಪ್ರತಿನಿಧಿಸಲಿದ್ದಾರೆ. ಜನರ ಕಷ್ಟಗಳನ್ನ ಅರಿತಿದ್ದಾರೆ. ಅನೇಕರು ರಾಹುಲ್‌ರನ್ನು ಪ್ರಧಾನಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯಾಗಿ ನೋಡಿದ್ದಾರೆ. ಆಗಾಗಿ ಪ್ರಧಾನಿ ಅಭ್ಯರ್ಥಿಗೆ ರಾಹುಲ್‌ ಗಾಂಧಿ ಅವರೇ ಸೂಕ್ತ ಎಂದು ಹೇಳಿದ್ದಾರೆ.

ಪ್ರಸಕ್ತ ಚುನಾವಣೆ ಮೂಲಕವೇ ಪ್ರಿಯಾಂಕ ಗಾಂಧಿ ರಾಜಕೀಯ ಪ್ರವೇಶಿಸಬೇಕು ಎಂಬುದಿತ್ತು. ಅದರಂತೆ ರಾಯ್‌ಬರೇಲಿಯಿಂದ ಅವರು ಕಣಕ್ಕಿಳಿಯಬೇಕು ಎಂಬ ನಿರ್ಧಾರವು ಆಗಿತ್ತು.  ಆದರೆ ಅಣ್ಣ ರಾಹುಲ್‌ ಸ್ಪರ್ಧಿಸಲಿ, ನಾನು ಅವರ ಪರವಾಗಿ ಪ್ರಚಾರದಲ್ಲಿ ತೊಡಗುತ್ತೇನೆ ಎಂದು ಪ್ರಿಯಾಂಕ ಕಣದಿಂದ ಹಿಂದೆ ಸರಿದಿದ್ದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

7 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

7 hours ago