ದೇಶ- ವಿದೇಶ

ಪ್ರಧಾನಿ ಅಭ್ಯರ್ಥಿ: ನನ್ನ ಆಯ್ಕೆ ರಾಹುಲ್‌ ಎಂದ ಖರ್ಗೆ

ನವದೆಹಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಇಂಡಿಯ ಬಣ ಖಚಿತವಾಗಿ ಉತ್ತರ ನೀಡಿರಲಿಲ್ಲ. ಚುನಾವಣೆ ಮುಗಿದು ಫಲಿತಾಂಶದ ಬಳಿಕ ಇಂಡಿಯಾ ಬಣ ಗೆದ್ದರೆ ಆ ನಂತರ ಪ್ರಧಾನಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಮೈತ್ರಿ ಕೂಟದ ನಾಯಕರು ಹೇಳುತ್ತಿದ್ದರು. ಆದರೆ, ಇದೀಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಿ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್‌ ಗಾಂಧಿ ನನ್ನ ಆಯ್ಕೆ ಎಂದಿದ್ದಾರೆ.

ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಅಭ್ಯರ್ಥಿ ಹುದ್ದೆಗೆ ರಾಹುಲ್‌ ಗಾಂಧಿ ನನ್ನ ಆಯ್ಕೆ ಎಂದು ಹೇಳುವ ಮೂಲಕ ಖರ್ಗೆ ರಾಹುಲ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎನ್‌ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಎರಡು ಬಾರಿ ಭಾರತ್‌ ಜೋಡೊ ಯಾತ್ರೆ ಕೈಗೊಂಡಿದ್ದು, ಈ ಬಾರಿಯ ಚುನಾವಣೆಗೆ ಸಾಕಷ್ಟು ನೆರವಾಯಿತು. ಈ ನಡುವೆ ಹಲವು ಪಕ್ಷಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದೇವೆ. ಮೋದಿ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿ, ಎದುರಿಸಿದ ರೀತಿಯಿಂದಾಗಿ ಅವರೇ ಪ್ರಧಾನಿ ಹುದ್ದೆಗೆ ಸೂಕ್ತ ಎಂದಿದ್ದಾರೆ.

ರಾಹುಲ್‌ ದೇಶದ ಉದ್ದಗಲಕ್ಕೂ ಯುವ ಸಮೂಹವನ್ನು ಪ್ರತಿನಿಧಿಸಲಿದ್ದಾರೆ. ಜನರ ಕಷ್ಟಗಳನ್ನ ಅರಿತಿದ್ದಾರೆ. ಅನೇಕರು ರಾಹುಲ್‌ರನ್ನು ಪ್ರಧಾನಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯಾಗಿ ನೋಡಿದ್ದಾರೆ. ಆಗಾಗಿ ಪ್ರಧಾನಿ ಅಭ್ಯರ್ಥಿಗೆ ರಾಹುಲ್‌ ಗಾಂಧಿ ಅವರೇ ಸೂಕ್ತ ಎಂದು ಹೇಳಿದ್ದಾರೆ.

ಪ್ರಸಕ್ತ ಚುನಾವಣೆ ಮೂಲಕವೇ ಪ್ರಿಯಾಂಕ ಗಾಂಧಿ ರಾಜಕೀಯ ಪ್ರವೇಶಿಸಬೇಕು ಎಂಬುದಿತ್ತು. ಅದರಂತೆ ರಾಯ್‌ಬರೇಲಿಯಿಂದ ಅವರು ಕಣಕ್ಕಿಳಿಯಬೇಕು ಎಂಬ ನಿರ್ಧಾರವು ಆಗಿತ್ತು.  ಆದರೆ ಅಣ್ಣ ರಾಹುಲ್‌ ಸ್ಪರ್ಧಿಸಲಿ, ನಾನು ಅವರ ಪರವಾಗಿ ಪ್ರಚಾರದಲ್ಲಿ ತೊಡಗುತ್ತೇನೆ ಎಂದು ಪ್ರಿಯಾಂಕ ಕಣದಿಂದ ಹಿಂದೆ ಸರಿದಿದ್ದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

2 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

2 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

2 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

2 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

2 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

2 hours ago