ದೇಶ- ವಿದೇಶ

ವಯನಾಡು ಕ್ಷೇತ್ರಕ್ಕೆ ಪರಿಹಾರ ಘೋಷಿಸುವಂತೆ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್‌ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನೂತನ ಸಂಸತ್‌ ಆವರಣದಲ್ಲಿ ಇಂದು(ಡಿ.14) ಕೇಂದ್ರ ಸರ್ಕಾರದ ತಾರತಮ್ಮ ನೀತಿಯನ್ನು ಖಂಡಿಸಿ ಕೇರಳ ಸಂಸದರೊಡನೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಮ್ಮ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸಿ, ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇರಳ ಭಾರತದಲ್ಲಿದ್ದು, ವಯನಾಡು ಕ್ಷೇತ್ರಕ್ಕೆ ನ್ಯಾಯ ದೊರಕಿಸಿ ಎಂದು ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಯನಾಡು ಕ್ಷೇತ್ರದಲ್ಲಾದ ಭೀಕರ ಭೂಕುಸಿತವನ್ನು ಇಡೀ ದೇಶವೇ ನೋಡಿದೆ. ಈ ಕ್ಷೆತ್ರಕ್ಕೆ ಸಮವಾಗುವಂತೆ ಹರಿಯಾಣದಲ್ಲೂ ಸಹ ವಿಪತ್ತು ಸಂಭವಿಸಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ರಾಜಕೀಯ ತಾರತಮ್ಮ ಮಾಡಿ ಈ ಎರಡೂ ಕ್ಷೇತ್ರಗಳಿಗೂ ನೆರವು ನೀಡುತ್ತಿಲ್ಲ. ಅಲ್ಲದೇ ಈಗಾಗಲೇ ನಾವು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿದ್ದು, ಪ್ರಧಾನ ಮಂತ್ರಿಗೂ ಪತ್ರ ಬರೆದಿದ್ದೇವೆ. ನೈಸರ್ಗಿಕ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ ಮಾಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರದ ವತಿಯಿಂದ ವಯನಾಡಿಗೆ ವಿಶೇಷ ಪ್ಯಾಕೇಜ್‌ ನೀಡಲು ನಿರಾಕರಿಸುತ್ತಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

8 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

9 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

10 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

10 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

12 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

14 hours ago