ದೇಶ- ವಿದೇಶ

ವಯನಾಡು ಕ್ಷೇತ್ರಕ್ಕೆ ಪರಿಹಾರ ಘೋಷಿಸುವಂತೆ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್‌ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನೂತನ ಸಂಸತ್‌ ಆವರಣದಲ್ಲಿ ಇಂದು(ಡಿ.14) ಕೇಂದ್ರ ಸರ್ಕಾರದ ತಾರತಮ್ಮ ನೀತಿಯನ್ನು ಖಂಡಿಸಿ ಕೇರಳ ಸಂಸದರೊಡನೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಮ್ಮ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸಿ, ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇರಳ ಭಾರತದಲ್ಲಿದ್ದು, ವಯನಾಡು ಕ್ಷೇತ್ರಕ್ಕೆ ನ್ಯಾಯ ದೊರಕಿಸಿ ಎಂದು ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಯನಾಡು ಕ್ಷೇತ್ರದಲ್ಲಾದ ಭೀಕರ ಭೂಕುಸಿತವನ್ನು ಇಡೀ ದೇಶವೇ ನೋಡಿದೆ. ಈ ಕ್ಷೆತ್ರಕ್ಕೆ ಸಮವಾಗುವಂತೆ ಹರಿಯಾಣದಲ್ಲೂ ಸಹ ವಿಪತ್ತು ಸಂಭವಿಸಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ರಾಜಕೀಯ ತಾರತಮ್ಮ ಮಾಡಿ ಈ ಎರಡೂ ಕ್ಷೇತ್ರಗಳಿಗೂ ನೆರವು ನೀಡುತ್ತಿಲ್ಲ. ಅಲ್ಲದೇ ಈಗಾಗಲೇ ನಾವು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿದ್ದು, ಪ್ರಧಾನ ಮಂತ್ರಿಗೂ ಪತ್ರ ಬರೆದಿದ್ದೇವೆ. ನೈಸರ್ಗಿಕ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ ಮಾಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರದ ವತಿಯಿಂದ ವಯನಾಡಿಗೆ ವಿಶೇಷ ಪ್ಯಾಕೇಜ್‌ ನೀಡಲು ನಿರಾಕರಿಸುತ್ತಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago