ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನೂತನ ಸಂಸತ್ ಆವರಣದಲ್ಲಿ ಇಂದು(ಡಿ.14) ಕೇಂದ್ರ ಸರ್ಕಾರದ ತಾರತಮ್ಮ ನೀತಿಯನ್ನು ಖಂಡಿಸಿ ಕೇರಳ ಸಂಸದರೊಡನೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಮ್ಮ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸಿ, ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇರಳ ಭಾರತದಲ್ಲಿದ್ದು, ವಯನಾಡು ಕ್ಷೇತ್ರಕ್ಕೆ ನ್ಯಾಯ ದೊರಕಿಸಿ ಎಂದು ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ವಯನಾಡು ಕ್ಷೇತ್ರದಲ್ಲಾದ ಭೀಕರ ಭೂಕುಸಿತವನ್ನು ಇಡೀ ದೇಶವೇ ನೋಡಿದೆ. ಈ ಕ್ಷೆತ್ರಕ್ಕೆ ಸಮವಾಗುವಂತೆ ಹರಿಯಾಣದಲ್ಲೂ ಸಹ ವಿಪತ್ತು ಸಂಭವಿಸಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ರಾಜಕೀಯ ತಾರತಮ್ಮ ಮಾಡಿ ಈ ಎರಡೂ ಕ್ಷೇತ್ರಗಳಿಗೂ ನೆರವು ನೀಡುತ್ತಿಲ್ಲ. ಅಲ್ಲದೇ ಈಗಾಗಲೇ ನಾವು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿದ್ದು, ಪ್ರಧಾನ ಮಂತ್ರಿಗೂ ಪತ್ರ ಬರೆದಿದ್ದೇವೆ. ನೈಸರ್ಗಿಕ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರದ ವತಿಯಿಂದ ವಯನಾಡಿಗೆ ವಿಶೇಷ ಪ್ಯಾಕೇಜ್ ನೀಡಲು ನಿರಾಕರಿಸುತ್ತಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…