ನವದೆಹಲಿ: ಎಲ್ಲರ ಊಹೆಯಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಕುಟುಂಬ ಕ್ಷೇತ್ರವಾದ ರಾಯ್ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ.
ಇನ್ನು ಈ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಆ ಮೂಲಕ ಪ್ರಿಯಾಂಕಾ ಅವರು ಕೇರಳದ ವಯನಾಡಿನಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿರುವ ಅವರು ರಾಹುಲ್ ಗಾಂಧಿ ಅನುಪಸ್ಥಿತಿ ಕಾಡದಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇನ್ನು ತಾವು ವಯನಾಡ್ ಕ್ಷೇತ್ರ ಬಿಟ್ಟುಕೊಟ್ಟ ಬಳಿಕ ಮೊದಲ ಬಾರಿಗೆ ಮಾತನಾಡಿರುವ ಅವರು, “ನನಗೆ ವೈನಾಂಡ್ ಮತ್ತು ರಾಯ್ಬರೇಲಿಯೊಂದಿಗೆ ಭಾವನಾತ್ಮಕ ಸಂಬಂಧವಿದೆ. ನಾನು ಕಳೆದ 5 ವರ್ಷಗಳಿಂದ ವಯನಾಡಿನ ಸಂಸದನಾಗಿದ್ದೆ. ಜನರ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡಿನಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಆದರೆ ನಾನು ಮಾಡುತ್ತೇನೆ. ನಿಯತಕಾಲಿಕವಾಗಿ ವಯನಾಡ್ಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.
ಇನ್ನು ತಾವು ಕೇರಳದಿಂದ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಗಾಂಧಿ ಅವರು, “ವಯನಾಡನ್ನು ಪ್ರತಿನಿಧಿಸಲು ಸಾಧ್ಯವಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಮತ್ತು ಅವರ (ರಾಹುಲ್ ಗಾಂಧಿ) ಅನುಪಸ್ಥಿತಿಯನ್ನು ನಾನು ಅನುಭವಿಸಲು ನಾನು ಬಿಡುವುದಿಲ್ಲ. ನಾನು ಶ್ರಮಿಸುತ್ತೇನೆ ಮತ್ತು ಎಲ್ಲರನ್ನು ಸಂತೋಷಪಡಿಸಲು ಮತ್ತು ಒಳ್ಳೆಯವರಾಗಿರಲು ನಾನು ಪ್ರಯತ್ನಿಸುತ್ತೇನೆ. ನಾನು ರಾಯ್ಬರೇಲಿ ಮತ್ತು ಅಮೇಥಿಯೊಂದಿಗೆ ಹಳೆಯ ಸಂಬಂಧವನ್ನು ಹೊಂದಿದ್ದೇನೆ ಮತ್ತು ರಾಯ್ಬರೇಲಿ ಮತ್ತು ವಯನಾಡಿನಲ್ಲಿ ನಾನು ಸಹ ನನ್ನ ಸಹೋದರನಿಗೆ ಸಹಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…