ದೇಶ- ವಿದೇಶ

ರಾಹುಲ್‌ ಗಾಂಧಿ ವಿರುದ್ಧದ ಕಾರ್ಯಕ್ರಮ: ಜೀ ನ್ಯೂಸ್‌ ಸಂಪಾದಕ ರಜನೀಶ್‌ಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ

ನವದೆಹಲಿ : ಉದಯ್‌ಪುರದ ಕನ್ಹಯ್ಯ ಲಾಲ್‌ ತೇಜಿ ಕೊಲೆ ಆರೋಪಿಗಳನ್ನು ಕ್ಷಮಿಸಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ ಎಂಬ ಕಾರ್ಯಕ್ರಮ ಪ್ರಸಾರ ಮಾಡಿದ್ದಕ್ಕೆ ಜೀ ನ್ಯೂಸ್‌ ಸಂಪಾದಕ ರಜನೀಶ್‌ ಅಹುಜಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅವರನ್ನು ಬಂಧಿಸದಂತೆ ಶುಕ್ರವಾರ ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ.

ಅಹುಜಾ ಮನವಿಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿ ಮಾಡಿರುವ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಮತ್ತು ಜೆ ಬಿ ಪರ್ದಿವಾಲಾ ಅವರ ನೇತೃತ್ವದ ವಿಭಾಗೀಯವು ಪೀಠವು ಸುದ್ದಿ ವಾಚಕ ರೋಹಿತ್‌ ರಂಜನ್‌ ಮನವಿ ಜೊತೆಗೆ ಹಾಲಿ ಮನವಿಯನ್ನು ಸೇರಿಸಲು ರಿಜಿಸ್ಟ್ರಿಗೆ ನಿರ್ದೇಶನ ನೀಡಿದೆ.

“ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣ ಅಥವಾ ಮುಂದೆ ದಾಖಲಾಗಬಹುದಾದ ಪ್ರಕರಣದಲ್ಲಿ ಸಂಪಾದಕರ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು. ಕೇಂದ್ರ ಮತ್ತು ರಾಜಸ್ಥಾನ, ಛತ್ತೀಸಗಢ ರಾಜ್ಯ ಸರ್ಕಾರಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ” ಎಂದು ಪೀಠ ಹೇಳಿದೆ.

ಅಹುಜಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ದವೆ ಅವರು “ಅಹುಜಾ ವಿರುದ್ಧ ಛತ್ತೀಸಗಢದ ರಾಯಪುರ, ರಾಜಸ್ಥಾನದ ಸಿಕಾರ್‌ನಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದರು.

ಉದಯಪುರದಲ್ಲಿ ಕನ್ಹಯ್ಯ ಲಾಲ್‌ ತೇಜಿ ಅವರನ್ನು ಕೊಲೆ ಮಾಡಿದವರನ್ನು ಕ್ಷಮಿಸಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಜೀ ನ್ಯೂಸ್‌ ಸುದ್ದಿ ಪ್ರಸಾರ ಮಾಡಿತ್ತು. ಕೇರಳದಲ್ಲಿ ತಮ್ಮ ಕಚೇರಿಯನ್ನು ಧ್ವಂಸಗೊಳಿಸಿದ್ದವರನ್ನು ಕ್ಷಮಿಸಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದರೇ ವಿನಾ ತೇಜಿ ಕೊಲೆಗಾರರನ್ನಲ್ಲ. ಆನಂತರ, ವಾಹಿನಿಯು ಕ್ಷಮೆ ಕೋರಿತ್ತು.

andolana

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

4 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

4 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

5 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

5 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

5 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

5 hours ago