ಹೈದರಬಾದ್: ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿಸಿಎಂ ಪವನ್ ಕಲ್ಯಾಣ್ ಅವರು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವವರಿಗೆ ಗೌರವ ಹಾಗೂ ಕೃತಜ್ಞತೆಯ ಸೂಚಕವಾಗಿ ಈ ಕ್ರಮ ಕೈಗೊಳ್ಳಲಾಗುತ್ತದೆ.
ರಾಜ್ಯದ ಗ್ರಾಮ ಪಂಚಾಯಿತಿ ಮಿತಿಯೊಳಗಿರುವ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿಗೆ ಸೇರಿದ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:- ಕದನ ವಿರಾಮ: ಇಂದು ಭಾರತ-ಪಾಕ್ ನಡುವೆ ಮಹತ್ವದ ಮಾತುಕತೆ
ದೇಶಾದ್ಯಂತ ನಿಯೋಜಿತ ಸ್ಥಳಗಳನ್ನು ಲೆಕ್ಕಿಸದೇ ಎಲ್ಲಾ ಸಕ್ರಿಯ ಸಿಬ್ಬಂದಿಯ ಕುಟುಂಬಕ್ಕೆ ಈ ನಿಯಮ ಅನ್ವಯವಾಗಲಿದೆ. ಈ ನಿರ್ಧಾರ ಸೇನೆ, ನೌಕಾಪಡೆ, ವಾಯುಪಡೆ, ಸಿಆರ್ಪಿಎಫ್ ಮತ್ತು ಅರೆಸೈನಿಕ ಪಡೆಗಳ ಧೈರ್ಯವನ್ನು ಗೌರವಿಸುತ್ತದೆ. ರಾಷ್ಟ್ರಕ್ಕೆ ಸೈನಿಕರ ಸೇವೆ ಅಪಾರ ಎಂದು ತಿಳಿಸಿದ್ದಾರೆ.





