ಹೈದರಬಾದ್: ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿಸಿಎಂ ಪವನ್ ಕಲ್ಯಾಣ್ ಅವರು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವವರಿಗೆ ಗೌರವ ಹಾಗೂ ಕೃತಜ್ಞತೆಯ ಸೂಚಕವಾಗಿ ಈ ಕ್ರಮ ಕೈಗೊಳ್ಳಲಾಗುತ್ತದೆ.
ರಾಜ್ಯದ ಗ್ರಾಮ ಪಂಚಾಯಿತಿ ಮಿತಿಯೊಳಗಿರುವ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿಗೆ ಸೇರಿದ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:- ಕದನ ವಿರಾಮ: ಇಂದು ಭಾರತ-ಪಾಕ್ ನಡುವೆ ಮಹತ್ವದ ಮಾತುಕತೆ
ದೇಶಾದ್ಯಂತ ನಿಯೋಜಿತ ಸ್ಥಳಗಳನ್ನು ಲೆಕ್ಕಿಸದೇ ಎಲ್ಲಾ ಸಕ್ರಿಯ ಸಿಬ್ಬಂದಿಯ ಕುಟುಂಬಕ್ಕೆ ಈ ನಿಯಮ ಅನ್ವಯವಾಗಲಿದೆ. ಈ ನಿರ್ಧಾರ ಸೇನೆ, ನೌಕಾಪಡೆ, ವಾಯುಪಡೆ, ಸಿಆರ್ಪಿಎಫ್ ಮತ್ತು ಅರೆಸೈನಿಕ ಪಡೆಗಳ ಧೈರ್ಯವನ್ನು ಗೌರವಿಸುತ್ತದೆ. ರಾಷ್ಟ್ರಕ್ಕೆ ಸೈನಿಕರ ಸೇವೆ ಅಪಾರ ಎಂದು ತಿಳಿಸಿದ್ದಾರೆ.
ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…
ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…