ಸೇನಾ ಸಿಬ್ಬಂದಿ ಕುಟುಂಬಕ್ಕೆ ಆಸ್ತಿ ತೆರಿಗೆ ವಿನಾಯಿತಿ: ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌

ಹೈದರಬಾದ್:‌ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಡಿಸಿಎಂ ಪವನ್‌ ಕಲ್ಯಾಣ್‌ ಅವರು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವವರಿಗೆ ಗೌರವ ಹಾಗೂ ಕೃತಜ್ಞತೆಯ ಸೂಚಕವಾಗಿ ಈ ಕ್ರಮ ಕೈಗೊಳ್ಳಲಾಗುತ್ತದೆ.

ರಾಜ್ಯದ ಗ್ರಾಮ ಪಂಚಾಯಿತಿ ಮಿತಿಯೊಳಗಿರುವ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿಗೆ ಸೇರಿದ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:- ಕದನ ವಿರಾಮ: ಇಂದು ಭಾರತ-ಪಾಕ್‌ ನಡುವೆ ಮಹತ್ವದ ಮಾತುಕತೆ

ದೇಶಾದ್ಯಂತ ನಿಯೋಜಿತ ಸ್ಥಳಗಳನ್ನು ಲೆಕ್ಕಿಸದೇ ಎಲ್ಲಾ ಸಕ್ರಿಯ ಸಿಬ್ಬಂದಿಯ ಕುಟುಂಬಕ್ಕೆ ಈ ನಿಯಮ ಅನ್ವಯವಾಗಲಿದೆ. ಈ ನಿರ್ಧಾರ ಸೇನೆ, ನೌಕಾಪಡೆ, ವಾಯುಪಡೆ, ಸಿಆರ್‌ಪಿಎಫ್‌ ಮತ್ತು ಅರೆಸೈನಿಕ ಪಡೆಗಳ ಧೈರ್ಯವನ್ನು ಗೌರವಿಸುತ್ತದೆ. ರಾಷ್ಟ್ರಕ್ಕೆ ಸೈನಿಕರ ಸೇವೆ ಅಪಾರ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

8 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

8 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

8 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

9 hours ago