ಹೈದರಬಾದ್: ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿಸಿಎಂ ಪವನ್ ಕಲ್ಯಾಣ್ ಅವರು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವವರಿಗೆ ಗೌರವ ಹಾಗೂ ಕೃತಜ್ಞತೆಯ ಸೂಚಕವಾಗಿ ಈ ಕ್ರಮ ಕೈಗೊಳ್ಳಲಾಗುತ್ತದೆ.
ರಾಜ್ಯದ ಗ್ರಾಮ ಪಂಚಾಯಿತಿ ಮಿತಿಯೊಳಗಿರುವ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿಗೆ ಸೇರಿದ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:- ಕದನ ವಿರಾಮ: ಇಂದು ಭಾರತ-ಪಾಕ್ ನಡುವೆ ಮಹತ್ವದ ಮಾತುಕತೆ
ದೇಶಾದ್ಯಂತ ನಿಯೋಜಿತ ಸ್ಥಳಗಳನ್ನು ಲೆಕ್ಕಿಸದೇ ಎಲ್ಲಾ ಸಕ್ರಿಯ ಸಿಬ್ಬಂದಿಯ ಕುಟುಂಬಕ್ಕೆ ಈ ನಿಯಮ ಅನ್ವಯವಾಗಲಿದೆ. ಈ ನಿರ್ಧಾರ ಸೇನೆ, ನೌಕಾಪಡೆ, ವಾಯುಪಡೆ, ಸಿಆರ್ಪಿಎಫ್ ಮತ್ತು ಅರೆಸೈನಿಕ ಪಡೆಗಳ ಧೈರ್ಯವನ್ನು ಗೌರವಿಸುತ್ತದೆ. ರಾಷ್ಟ್ರಕ್ಕೆ ಸೈನಿಕರ ಸೇವೆ ಅಪಾರ ಎಂದು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…