ದೇಶ- ವಿದೇಶ

ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪ್ರತಿಭಟನೆ

ಇಸ್ಲಾಮಾಬಾದ್ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪಾಕಿಸ್ಥಾನಕ್ಕೆ ಈಗ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪಾಕ್ ಮಿಲಿಟರಿ ಹಾಗೂ ಸರ್ಕಾರದ ವಿರುದ್ಧ ಜನರು ತಿರುಗಿಬಿದ್ದಾರೆ.
ಗಿಲ್ಗಿಟ್ ಹಾಗೂ ಬಾಲ್ಟಿಸ್ಥಾನವನ್ನು ಆಕ್ರಮಿಸಿಕೊಂಡಿರುವ ಪಾಕಿಸ್ಥಾನಕ್ಕೆ ಅಲ್ಲಿನ ಜನರಿಗೆ ಸವಲತ್ತುಗಳನ್ನು ಒದಗಿಸುವ ಸಾಮರ್ಥ್ಯವೂ ಇಲ್ಲ. ಎಲ್ಲ ಸೌಕರ್ಯ ಹಾಗೂ ಅಭಿವೃದ್ಧಿ ಯೋಜನೆಗಳಲ್ಲೂ ಸರ್ಕಾರ, ಪಿಒಕೆಗೆ ತಾರತಮ್ಯ ಎಸಗುತ್ತಿದೆ. ಪಾಕ್ ಸರ್ಕಾರ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ, ಅಕ್ರಮವಾಗಿ ನಮ್ಮ ಭೂಮಿಯನ್ನು ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ 12 ದಿನಗಳಿಂದಲೂ ಗಿಲ್ಗಿಟ್-ಬಾಲ್ಟಿಸ್ಥಾನದ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.
ಪಾಕ್ ಸರ್ಕಾರದ ದುರಾಡಳಿತದಿಂದ ಜೀವನಕ್ಕೆ ತೊಂದರೆಯಾಗಿದೆ. ಹೀಗಾಗಿ, ಭಾರತದ ಜತೆಗೆ ಗಿಲ್ಗಿಟ್-ಬಾಲ್ಟಿಸ್ಥಾನ ವಿಲೀನಗೊಳ್ಳಲು ಅವಕಾಶ ನೀಡಲೇಬೇಕು ಎಂದು ಸ್ಥಳೀಯರು 12 ದಿನಗಳಿಂದ ಪ್ರತಿಭಟಿಸಿ, ಆಗ್ರಹಿಸುತ್ತಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

19 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

19 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

19 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

19 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

19 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

22 hours ago