ದೇಶ- ವಿದೇಶ

ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಕೊನೆಯ ಆಸೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನಸಂಖ್ಯೆ ಇದೆ. ನಮಗೆ 20 ಟಿಎಂಸಿ ನೀರು ಸಿಗುತ್ತಿದ್ದು, 50ಕ್ಕೂ ಅಧಿಕ ಟಿಎಂಸಿ ನೀರಿನ ಅಗತ್ಯವಿದೆ. ಕಾವೇರಿ, ಮಹದಾಯಿ, ಕೃಷ್ಣ ಈ ಮೂರು ಅಂತರ ರಾಜ್ಯ ವಿವಾದದಲ್ಲಿದೆ. ಮುಂದಿನ ತಿಂಗಳು ನೀರಿನ ಕೊರತೆ ಕಾಡಲಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿಗೆ ಕುಡಿಯುವ ನೀರಿನ ಅವಶ್ಯಕತೆ ಇದ್ದು, ಈ ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಮನಮೋಹನ್‌ ಸಿಂಗ್‌ ಅವರಿಗೆ ಭಿಕ್ಷೆ ಬೇಡಿದೆ. ಆದ್ರೆ ಅವರು ಇದು ಸಾಧ್ಯವಿಲ್ಲ ಎಂದುಬಿಟ್ಟರು. ಪ್ರಧಾನಿ ಮೋದಿ ಅವರು ಈ ಸಮಸ್ಯೆಯನ್ನು ಬಗೆಹರಿಸಬಹುದು. ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ದೇವೇಗೌಡ ಅವರು, ಮೂರನೇ ಅವಧಿಯಲ್ಲಿ ಬಹುಮತ ಬರದಿದ್ದರೂ ವಿಪಕ್ಷಗಳು ಬೆಂಬಲ ನೀಡಿ, ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿದರು. ಈ ಸರ್ಕಾರ ಐದು ವರ್ಷ ಮುಂದುವರಿಯಲಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

6 hours ago